Thursday, May 16, 2024

‘ಸಿದ್ದು ಕಾಂಗ್ರೆಸ್ ಬಿಟ್ರೂ ಆಶ್ಚರ್ಯವಿಲ್ಲ’: ಬಿ.ಸಿ ಪಾಟೀಲ್​​​

ಹಾವೇರಿ:ಕೇಂದ್ರ ಸರಕಾರದ ಬಜೆಟ್ ಅಭಿವೃದ್ಧಿಗೆ ಪೂರಕವಾಗಿದೆ. ಮುಂದಿನ ಇಪ್ಪತ್ತೈದು ವರ್ಷಗಳ ಮುಂದಾಲೋಚನೆ ಇಟ್ಕೊಂಡು ಬಜೆಟ್ ಮಂಡನೆ ಆಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್​​​ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಮಾತನಾಡಿದ ಅವರು, ಬಜೆಟ್​​ನಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಘೋಷಣೆ ಮಾಡಿದ್ದಾರೆ. ಸಮೀಕ್ಷೆಗೆ ಡ್ರೋಣ್​​​ ಟೆಕ್ನಾಲಜಿ ಅಳವಡಿಕೆಗೆ ಹೆಚ್ಚಿನ ಒತ್ತು ನೀಡಿದೆ. ಒಂಬತ್ತು ಲಕ್ಷ ಹೆಕ್ಟೇರ್ ಜಮೀನಿಗೆ ನೀರಾವರಿಗೆ ಒತ್ತು ನೀಡಿದೆ ಎಂದರು. ಇದೇ ವೇಳೆ ಕಾಂಗ್ರೆಸ್​ನಲ್ಲಿ ಮುಖಂಡರು ಪಕ್ಷ ಬಿಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ ಕಾಂಗ್ರೆಸ್ ತ್ಯಜಿಸಿದ್ರೂ ಆಶ್ಚರ್ಯವಿಲ್ಲ. ಅಲ್ಲಿ ಆ ರೀತಿಯ ವಾತಾವರಣವಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​​​ ಒಬ್ಬರ ಮುಖವನ್ನೊಬ್ಬರು ನೋಡದ ಪರಿಸ್ಥಿತಿ ಅಲ್ಲಿದೆ ಎಂದು ವ್ಯಂಗ್ಯವಾಡಿದರು.

RELATED ARTICLES

Related Articles

TRENDING ARTICLES