Friday, September 20, 2024

‘ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುವುದೇ ಬಿಜೆಪಿ‌ ನಾಯಕರ ಡ್ಯೂಟಿ’

ಮಂಗಳೂರು : ದೇಶದಲ್ಲಿ ಅಶಾಂತಿ ಸೃಷ್ಟಿಸುವುದು ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುವುದೇ ಬಿಜೆಪಿ‌ ನಾಯಕರ ಡ್ಯೂಟಿ ಎಂದು ಮಂಗಳೂರಿನಲ್ಲಿಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರ ಕೆಲಸವೇ ಮಕ್ಕಳಲ್ಲಿ ಅಶಾಂತಿ ಸೃಷ್ಟಿಸುವುದು. ಈ ಕೆಲಸವನ್ನು ಅವರು ಮೊದಲಿನಿಂದಲೇ ಮಾಡಿಕೊಂಡು ಬರುತ್ತಿದ್ದಾರೆ ಎಂದು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ದೇಶ ಬಹಳ ಕಷ್ಟದ ಪರಿಸ್ಥಿತಿಯಲ್ಲಿದೆ. ಆದ್ದರಿಂದ ದೇಶದ ಮರು ನಿರ್ಮಾಣ ಕಾರ್ಯಕ್ಕೆ ಕಾಂಗ್ರೆಸ್ ಪಕ್ಷದ ಅನಿವಾರ್ಯತೆಯಿದೆ. ಹಾಗಾಗಿ ಪಕ್ಷದಲ್ಲಿ ಹೊಸ ಸದಸ್ಯತ್ವದ ಅಭಿಯಾನ ಆರಂಭವಾಗಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದ ಚುನಾವಣೆ ಕೂಡಾ ಘೋಷಣೆಯಾಗಿದೆ. ಆದ್ದರಿಂದ ಮತದಾನದ ಹಕ್ಕು ಕೊಡುವುದಕ್ಕಾಗಿ ಒಂದು ತಿಂಗಳ ಸದಸ್ಯತ್ವದ ಅಭಿಯಾನ ನಡೆಯಲಿದೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES