Friday, May 10, 2024

ನಿಯಂತ್ರಣ ತಪ್ಪಿ ಮನೆ ಗೋಡೆಗೆ KSRTC ಬಸ್ ಡಿಕ್ಕಿ : ಯಾವುದೆ ಪ್ರಾಣಾಪಾಯವಿಲ್ಲ

ವಿಜಯನಗರ : ಚಾಲಕನ ನಿಯಂತ್ರಣ ತಪ್ಪಿ ಮನೆ ಗೋಡೆಗೆ ಗುದ್ದಿದ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಶಿವಪುರ ಬಳಿ ನಡೆದಿದೆ.

ಹೊಸಪೇಟೆಯಿಂದ ಕೂಡ್ಲಿಗಿಗೆ ತೆರಳುತ್ತಿದ ಕೆಎಸ್‌ಆರ್‌ಟಿಸಿ ಬಸ್ ಬೈಕ್ ಅಪಘಾತ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಮನೆ ಗೋಡೆಗೆ ಡಿಕ್ಕಿ ಹೊಡೆದಿದ್ದು, ಬಸ್ ಡ್ರೈವರ್, ಕಂಡಕ್ಟರ್ ಹಾಗೂ ಓರ್ವ ಪ್ರಯಾಣಿಕನಿಗೆ ಗಾಯಗೊಂಡಿದ್ದು, ಅದೃಷ್ಟವಶಾತ್ ಬಾರಿ ಅನಾಹುತ್ ತಪ್ಪಿದೆ.

ಬಸ್‌ನಲ್ಲಿದ್ದ 15 ಕ್ಕೂ ಹೆಚ್ಚು ಜನ ಪ್ರಯಾಣಕರಿದ್ದು, ಘಟನೆಯಲ್ಲಿ ಗಾಯಗೊಂಡ ಮೂವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES