Wednesday, October 23, 2024

ಇಂದು ವಿಶ್ವ ಪರಿಸರ ದಿನ ಹಿನ್ನೆಲೆ ಸದ್ಗುರು ಪ್ರಧಾನಿ ಮೋದಿ ಭೇಟಿ

ಬೆಂಗಳೂರು: ಇಶಾ ಫೌಂಡೇಷನ್‌ನ ಸಂಸ್ಥಾಪಕ ಜಗ್ಗಿ ವಾಸುದೇವ್ ಸದ್ಗುರು ಅವರು ವಿಶ್ವ ಪರಿಸರ ದಿನವಾದ  ಇಂದು ಬೆಳಿಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.

‘ಮಣ್ಣು ಉಳಿಸಿ’ ಅಭಿಯಾನದ ಭಾಗವಾಗಿ ಈ ಭೇಟಿ ನಡೆಯಲಿದ್ದು, ಮಣ್ಣು ಉಳಿಸುವ ನೀತಿಗೆ ಬೆಂಬಲಿಸುವಂತೆ ಮನವಿ ಮಾಡಲಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ಈ ಅಭಿಯಾನ ಪ್ರಾರಂಭವಾಗಿದೆ. 100 ದಿನಗಳ ಈ ಅಭಿಯಾನದಲ್ಲಿ ಮೋಟಾರ್ ಸೈಕಲ್‌ನಲ್ಲಿ 30 ಸಾವಿರ ಕಿ.ಮೀ ಪ್ರಯಾಣಿಸಲಿದ್ದಾರೆ. ಇಂದು ಅವರ ಪ್ರಯಾಣ 75ನೇ ದಿನಕ್ಕೆ ತಲುಪಲಿದೆ. ಹೀಗಾಗಿ, ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನೂ ಆಚರಿಸಲಾಗುತ್ತಿದೆ’ ಎಂದು ಫೌಂಡೇಷನ್ ತಿಳಿಸಿದೆ.

RELATED ARTICLES

Related Articles

TRENDING ARTICLES