ರಾಯಚೂರು : ನಗರಸಭೆಯ ನಿರ್ಲಕ್ಷ್ಯದಿಂದಾಗಿ ಕಲುಷಿತ ನೀರಿನ ಸೇವನೆಯಿಂದ ಆಟೋ ಚಾಲಕರೊಬ್ಬರು ಮೃತಪಟ್ಟಿದ್ದು, ಇದುವರಗೆ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.ಆಟೋ ಚಾಲಕರಾಗಿದ್ದ ಅರಬ್ ಮೊಹಲ್ಲಾ ನಿವಾಸಿ ಮೊಹಮ್ಮದ್ ನೂರ್ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾರೆ.
ಅದಲ್ಲದೇ, ಈಗಾಗಲೇ ನಗರದ ಮಲ್ಲಮ್ಮ ಮತ್ತು ಅಬ್ದುಲ್ ಗಫಾರ್ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ್ದಾರೆ. ನೂರಾರು ಜನ ಹಾಗೂ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾವಿನ ಸರಣಿ ಮುಂದುವರೆದಿದ್ದರೂ ಎಚ್ಚೆತ್ತುಕೊಳ್ಳದ ನಗರಸಭೆ ವಿರುದ್ಧ ಸಾರ್ವಜನಿಕರಲ್ಲಿ ಆಕ್ರೋಶ ಹೆಚ್ಚಾಗಿದೆ. ಇದರಿಂದ ನಾಗರಿಕ ವೇದಿಕೆಯಿಂದ ರಾಯಚೂರು ಬಂದ್ಗೆ ಕರೆ ನೀಡಲಾಗಿದೆ.
ಇನ್ನು ಈ ವಿಷಯದ ಕುರಿತು ಮಾತನಾಡಿದ ಸಿಎಂ ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರ ದುರ್ಮರಣ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡು ಪರಿಶೀಲಿಸುತ್ತೇನೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಕೊಡ್ತೇವೆ ಎಂದು ಘೋಷಣೆ