Sunday, May 19, 2024

ಪ್ರತಾಪ್​ ಸಿಂಹ ಆರ್ಥಿಕ ತಜ್ಞನಾ : ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಪರಿಷ್ಕರಣೆಯನ್ನೇ ರದ್ದು ಮಾಡಿ, ಬರಗೂರು ರಾಮಚಂದ್ರಪ್ಪ ಅವರ ಪರಿಷ್ಕರಣೆಯೇ ಜಾರಿಯಾಗಲಿ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಿತಿ ವಿಸರ್ಜನೆ ಪರಿಹಾರ ಅಲ್ಲ. ಪರಿಷ್ಕರಣೆಯನ್ನೇ ರದ್ದು ಮಾಡಿ, ಬರಗೂರು ರಾಮಚಂದ್ರಪ್ಪ ಅವರ ಪರಿಷ್ಕರಣೆಯೇ ಜಾರಿಯಾಗಲಿ. ಹಿಂದೂಗಳ ಭಾವನೆಗೆ ದಕ್ಕೆಯಾಗುವ ಕೆಲಸ ಮಾಡಿದ್ದಾರೆ. ಕವಿಗಳ, ಮಹಾತ್ಮರ ಕೃತಿಚೌರ್ಯ ನಡೆದಿವೆ. ನಾನು ಹಿಂದೂ ಅಲ್ವ, ಅಂಬೇಡ್ಕರ್ ಹಿಂದೂ ಅಲ್ವ. ಎಲ್ಲರಿಗೂ ಅವಮಾನ ಆಗಿದೆ ಎಂದರು.

ಅದಲ್ಲದೇ, ಸಿದ್ದರಾಮಯ್ಯಗೆ ಏನು ಗೊತ್ತು ಆರ್ಥಿಕತೆ ಅನ್ನೋ ಪ್ರತಾಪ್ ಸಿಂಹ ಹೇಳಿಕೆಗೆ ಸಿದ್ದರಾಮಯ್ಯ ಹೌದು ನಾನು ಆರ್ಥಿಕ ತಜ್ಞ ಅಲ್ಲ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಾಕ್ಟಿಸ್ ಮಾಡಿರೋ ವಕೀಲ. ಹೈಕೋರ್ಟ್ ಸುಪ್ರೀಂಕೋರ್ಟ್ ನಲ್ಲೂ ಪ್ರಾಕ್ಟಿಸ್ ಮಾಡಿಲ್ಲ. ನಾನು ಆರ್ಥಿಕತೆ ಬಗ್ಗೆ ಮಾತನಾಡಿರೋದು ತಪ್ಪು, ಸರಿ ಎಂದು ಹೇಳಲು ಪ್ರತಾಪ್ ಸಿಂಹ ಆರ್ಥಿಕ ತಜ್ಞನಾ ಯಡಿಯೂರಪ್ಪ, ಬೊಮ್ಮಾಯಿ ಆರ್ಥಿಕ ತಜ್ಞರೆ. ನಾನು ಓದಿದ ಲಾ ಬಗ್ಗೆ ಪ್ರಶ್ನಿಸಲು ಪ್ರತಾಪ್ ಸಿಂಹ, ಮೋದಿ ಇಬ್ಬರೂ ವಕೀಲರಾ.? ಮೋದಿ, ಪ್ರತಾಪ್ ಸಿಂಹನಿಗೆ ಆರ್ಥಿಕತೆ ಬಗ್ಗೆ ಏನು ಗೊತ್ತಾಗುತ್ತದೆ. ಸುಮ್ಮನೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಹೇಳಿದರು.

ಇನ್ನು, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಗೂ ಪ್ರತಾಪ್ ಸಿಂಹಗೂ ಏನು ಸಂಬಂಧ‌‌ ಪ್ರತಾಪ್ ಸಿಂಹ ಕ್ಷೇತ್ರ ವ್ಯಾಪ್ತಿಯಲ್ಲಿ ಎಷ್ಟು ಕಿಮೀ ಹೆದ್ದಾರಿ ಬರುತ್ತೆ. ನಾನು ಮೈಸೂರಿಗೆ ಏನು ಮಾಡಿದ್ದೇನೆ, ಅವ್ರು ಏನು ಮಾಡಿದ್ದಾರೆ ಚರ್ಚೆಗೆ ಬರಲಿ. ಚರ್ಚೆಗೆ ನಾನು ಬರುವುದಿಲ್ಲ ನಮ್ಮ ಪಕ್ಷದ ವಕ್ತಾರರನ್ನ ಕಳುಹಿಸುತ್ತೇನೆ. ದಾಖಲೆ ಸಮೇತ ಬಂದು ಚರ್ಚೆ ಮಾಡಲಿ. ಮೈಸೂರು ವಿಮಾನ ಉನ್ನತೀಕರಣ ಯಾರ ಕಾಲದಲ್ಲಿ ಆಗಿದ್ದು, ಪ್ರತಾಪ್ ಆ ಸಿಂಹನಿಗೆ ಏನು ಗೊತ್ತು ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

RELATED ARTICLES

Related Articles

TRENDING ARTICLES