Saturday, May 18, 2024

ಸಿಲಿಕಾನ್​ ಸಿಟಿಯಲ್ಲಿ ವರುಣನ ಅರ್ಭಟ

ಬೆಂಗಳೂರು : ಸಿಲಿಕಾನ್​ ಸಿಟಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆ ಧಾರಾಕಾರ ಮಳೆ ಸುರಿದಿದೆ, ನಗರದ ಬಸವನಗುಡಿ, ಮೆಜೆಸ್ಟಿಕ್, ಹನುಮಂತನಗರ, ವಿದ್ಯಾಪೀಠ ಸರ್ಕಲ್, ಮೈಸೂರು ರಸ್ತೆ, ಹೆಬ್ಬಾಳ, ಶಿವಾನಂದ ಸರ್ಕಲ್, ಯಶವಂತಪುರ, ಕೆ.ಆರ್. ಮಾರ್ಕೆಟ್, ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಇನ್ನೂ ಭಾರಿ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿವೆ, ಕೆಲವೆಡೆ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಮನೆ ತಲುಪಲು ಪರದಾಡುತ್ತಿದ್ದಾರೆ.

RELATED ARTICLES

Related Articles

TRENDING ARTICLES