Friday, May 10, 2024

ಹೈದರಾಬಾದ್‍ನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ

ಹೈದರಾಬಾದ್​ : ದಕ್ಷಿಣ ಭಾರತದಲ್ಲಿ ಶತಾಯಗತಾಯ ಪಕ್ಷವನ್ನು ಭದ್ರಪಡಿಸಿ ಅಧಿಕಾರ ಚುಕ್ಕಾಣಿ ಹಿಡಿಯಲೇಬೇಕೆಂದು ಪಣ ತೊಟ್ಟಿದೆ ಬಿಜೆಪಿ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಮುತ್ತಿನ ನಗರಿ ಹೈದರಾಬಾದ್‍ನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ.

ಉತ್ತರಭಾರತದಲ್ಲಿ ತನ್ನ ಮತ ಬ್ಯಾಂಕ್‍ನ್ನು ಗಟ್ಟಿ ಮಾಡಿಕೊಂಡಿರುವ ಬಿಜೆಪಿ ಇದೀಗ ದಕ್ಷಿಣ ಭಾರತದತ್ತ ಚಿತ್ತ ಹರಿಸಿದ್ದು, ಇದಕ್ಕಾಗಿಯೇ ತೆಲಂಗಾಣದಲ್ಲಿ ಎರಡು ದಿನಗಳ ಕಾಲ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಿದೆ. 2024ರ ಲೋಕಸಭೆ ಚುನಾವಣೆ ಹಾಗೂ ಈ ವರ್ಷದ ಅಂತ್ಯಕ್ಕೆ ನಡೆಯಲಿರುವ ಗುಜರಾತ್, ಹಿಮಾಚಲಪ್ರದೇಶ, 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೂ ಕಾರ್ಯತಂತ್ರವನ್ನು ಕಾರ್ಯಕಾರಿಣಿಯಲ್ಲಿ ಹೆಣೆಯಲಿದೆ. ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ಸಂಘಟನಾ ಕಾರ್ಯದರ್ಶಿಗಳು, ಬಿಜೆಪಿ ಆಡಳಿತವಿರುವ ಮುಖ್ಯಮಂತ್ರಿಗಳು, ಕಾರ್ಯಕಾರಿಣಿ ಸದಸ್ಯರು, ಸಂಸದೀಯ ಮಂಡಳಿಯ ಸದಸ್ಯರು ಸೇರಿದಂತೆ ಪ್ರಮುಖರು ಭಾಗವಹಿಸಿದ್ದಾರೆ.

RELATED ARTICLES

Related Articles

TRENDING ARTICLES