Saturday, June 15, 2024

ದ್ರೌಪದಿ ಮುರ್ಮು ಅವರ ಜೀವನ ಚರಿತ್ರೆ

ದ್ರೌಪದಿ ಮುರ್ಮು, 1958 ಜೂನ್ 20 ರಂದು ಜನನವಾಗಿದ್ದು, ಒಡಿಶಾ ರಾಜ್ಯದ ಮಯೂರ್ ಭಂಜ್ ಜಿಲ್ಲೆಯ ಬೈದಪೋಸಿ ಗ್ರಾಮದ ಸಂತಾಲಿ ಎಂಬ ಬುಡಕಟ್ಟು ಕುಟುಂಬದಲ್ಲಿ ಜನಿಸಿದರು. ಇವರ ತಂದೆ ಮತ್ತು ಅಜ್ಜ ಪಂಚಾಯಾತ್ ರಾಜ್‌ ಯೋಜನೆಯಡಿಯಲ್ಲಿ ಗ್ರಾಮದ ಮುಖ್ಯಸ್ಥರಾಗಿದ್ದರು. ದ್ರೌಪದಿ ಮುರ್ಮು ಅವರು ಭುವನೇಶ್ವರದ ರಮಾದೇವಿ ಮಹಿಳಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ರು. ಬಿಎ ಪದವಿ ಪಡೆದಿದ್ದಾರೆ .

ಸಹಾಯಕ ಪ್ರೊಫೆಸರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಇದಲ್ಲದೇ ಒಡಿಶಾ ರಾಜ್ಯದ ನೀರಾವರಿ ಇಲಾಖೆಯಲ್ಲಿ ಕಿರಿಯ ಸಹಾಯಕಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ದ್ರೌಪದಿ ಮುರ್ಮು ಅವರು ಶ್ಯಾಮ್ ಚರಣ್‌ ಮುರ್ಮು ಅವರನ್ನು ವಿವಾಹವಾಗಿದ್ದು, ಇವರಿಗೆ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬಳು ಮಗಳು ಇದ್ದರು. ಬಾಳಿನಲ್ಲಿ ವಿಧಿಯಾಟ ಇಬ್ಬರು ಗಂಡು ಮಕ್ಕಳು ಮರಣ ಹೊಂದಿದ್ದಾರೆ. ಪತಿಯು ಸಹ ಸಾವನ್ನಪ್ಪಿದ್ದಾರೆ.

ದ್ರೌಪದಿ ಮುರ್ಮು ರಾಜಕೀಯ ಜೀವನ :

ಒಡಿಶಾ ರಾಜ್ಯದ ರಾಯರಂಗಪುರದ ಜಿಲ್ಲೆಯಲ್ಲಿ ಕೌನ್ಸಿಲರ್ ಆಗಿ 1997 ರಲ್ಲಿ ತಮ್ಮ ರಾಜಕೀಯ ಜೀವನ ಆರಂಭಗೊಂಡಿತು. ಅದಾದ ಬಳಿಕ 2000 ರಲ್ಲಿ ಅದೇ ಕ್ಷೇತ್ರದಿಂದ ಒಡಿಶಾ ಅಸಂಬ್ಲಿಗೆ ಆಯ್ಕೆಯಾದರು. BJP ಪರಿಶಿಷ್ಟ ಪಂಗಡಗಳ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದಾರೆ. ಒಡಿಶಾದಲ್ಲಿ BJP & BJD ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹಲವು ಸಚಿವಾಲಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರು ಮಾದರಿ ಶಾಸಕಿಯಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಒಡಿಶಾ ಅಸೆಂಬ್ಲಿ ಪಂಡಿತ್ ನೀಲಕಂಠ ಪ್ರಶಸ್ತಿ ನೀಡಿದೆ.

ದ್ರೌಪದಿ ಮುರ್ಮು ಅವರು ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು. ಒಡಿಶಾದ ರಾಯರಂಗಪುರದಿಂದ 2000 ಮತ್ತು 2009 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಐದು ವರ್ಷಗಳ ಹಿಂದೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಭವನವನ್ನು ತೊರೆಯಲು ನಿರ್ಧರಿಸಿದಾಗ ದ್ರೌಪದಿ ಮುರ್ಮು ಅವರನ್ನು ಮೊದಲ ಸ್ಪರ್ಧಿಯಾಗಿ ಪರಿಗಣಿಸಲಾಗಿತ್ತು. ಇನ್ನೂ 2000 ರಲ್ಲಿ ಶಾಸಕಿಯಾಗಿ ಆಯ್ಕೆಯಾದ ಸಮಯದಲ್ಲಿ ಬಿಜೆಪಿ-ಬಿಜೆಡಿ ಸಮ್ಮಿಶ್ರ ಸರ್ಕಾರದಲ್ಲಿ ವಾಣಿಜ್ಯ, ಸಾರಿಗೆ, ಮೀನುಗಾರಿಕೆ, ಪಶುಸಂಗೋಪನೆ ಖಾತೆಗಳನ್ನು ಹೊಂದಿದ್ದರು. 2015 ದ್ರೌಪದಿ ಮುರ್ಮು ಅವರು ಜಾರ್ಖಂಡ್‌ನ ಮೊದಲ ಮಹಿಳಾ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದು ಮೊದಲ ಬಾರಿಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿಲ್ಲ, ಐದು ವರ್ಷಗಳ ಹಿಂದೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಭವನವನ್ನು ತೊರೆಯಲು ನಿರ್ಧರಿಸಿದಾಗ, ದ್ರೌಪದಿ ಮುರ್ಮು ಅವರನ್ನು ಮೊದಲ ಸ್ಪರ್ಧಿಯಾಗಿ ಪರಿಗಣಿಸಲಾಗಿತ್ತು. ಈಗ ಎರಡನೇ ಬಾರಿ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ಧಾರೆ.

RELATED ARTICLES

Related Articles

TRENDING ARTICLES