Sunday, September 22, 2024

ಬಿಜೆಪಿಗರು ಜನರ ಸೆಳೆಯುವ ಉದ್ದೇಶಕ್ಕೆ ಸುಳ್ಳು ಹೇಳುತ್ತಿದ್ದಾರೆ: ಪ್ರೊ.ನಂಜರಾಜ ಅರಸ್

ಮೈಸೂರು: ಬಿಜೆಪಿಯವರು ನೈಜವಾಗಿ ಮಾತನಾಡಬೇಕು, ಸುಳ್ಳುಗಳನ್ನ ಹೇಳಬಾರದು ಎಂದು ಮೈಸೂರಿನಲ್ಲಿ ಇತಿಹಾಸ ತಜ್ಞ ಪ್ರೊ. ನಂಜರಾಜ ಅರಸ್ ಅವರು ಬಿಜೆಪಿ ವಿರುದ್ದ ಕಿಡಿಕಾಡಿದ್ದಾರೆ.

ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣ ಹೆಸರು ಬದಲಾಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಅವಧಿಯಲ್ಲಿ ಹೆಸರು ಬದಲಾವಣೆಗೆ ಪತ್ರ ಬರೆಯಲಾಗಿತ್ತು. 2015 ಅಕ್ಟೋಬರ್ 9 ರಂದು ಪತ್ರ ಬರೆದಿದ್ದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯರಾಗಿದ್ದರು ಎಂದರು.

ಕಾಂಗ್ರೆಸ್ ನಾಯಕರು ನಮ್ಮ ಅವಧಿಯಲ್ಲಿ ವಿಮಾನ ನಿಲ್ದಾಣಕ್ಕೆ ಹೆಸರು ಬದಲಾವಣೆಗೆ ಶಿಫಾರಸು ಮಾಡಲಾಗಿತ್ತು ಎನ್ನುತ್ತಿದ್ದರು. ಆದರೆ, ಬಿಜೆಪಿಯವರು ಈಗ ನಾವು ಮಾಡಿದ್ದು ಅಂತಾ ಹೇಳ್ತಾ ಇದ್ದರು. ಇದಕ್ಕೆ ಪುಷ್ಟಿ ನೀಡುವಂತೆ ಪತ್ರದ ದಾಖಲೆ ಬಿಡುಗಡೆ ಮಾಡಿದ ಇತಿಹಾಸ ತಜ್ಞ ನಂಜರಾಜೇ ಅರಸ್ ಅವರು ಕಾಂಗ್ರೆಸ್ ಪಕ್ಷದ ಅವಧಿಯಲ್ಲೇ ಹೆಸರು ಬದಲಾವಣಗೆ ಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಇನ್ನು ಯಾವುದೇ ಪಕ್ಷದವರಾಗಲಿ ಸತ್ಯವನ್ನ ಹೇಳಬೇಕು. ಜನರ ಸೆಳೆಯುವ ಸಲುವಾಗಿ ಸುಳ್ಳುಗಳನ್ನ ಹೇಳುವ ಕೆಲಸ ಬಿಜೆಪಿಯದ್ದಾಗಿದೆ. ಸ್ಥಳೀಯ ಬಿಜೆಪಿ ನಾಯಕರು ಎಲ್ಲವನ್ನು ನಾವೇ ಮಾಡಿದ್ದು ಎಂದು ಹೇಳುವುದು ಸರಿಯಲ್ಲ. ಹಣೆಯ ಮೇಲೆ ಬೋರ್ಡ್ ಹಾಕಿಕೊಳ್ಳುವ ಕೆಲಸ ಮಾಡೋದು ಸರಿಯಲ್ಲ. ನಿಜವಾಗಿಯೂ ನಾಲ್ವಡಿಯವರ ಹೆಸರು ಬರಬೇಕೆಂದು ಬಯಸಿದ್ದು ಸಿದ್ದರಾಮಯ್ಯನವರು ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES