Friday, March 29, 2024

ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ: ಪ್ರಹ್ಲಾದ್ ಜೋಶಿ ಗಂಭೀರ ಆರೋಪ

ಪಿಎಫ್‍ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಬಸವರಾಜ್ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿಂದೆ ಪಿಎಫ್‍ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಬೊಮ್ಮಾಯಿ ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

ಪಿಎಫ್‍ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂಥಹ ಸಂಘಟನೆಗಳನ್ನು ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಬಸವರಾಜ್ ಬೊಮ್ಮಾಯಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆಯ ಜೊತೆ ಚರ್ಚೆ ನಡೆಸುವುದಾಗಿ ನನ್ನ ಜೊತೆ ಮಾತನಾಡುವಾಗ ತಿಳಿಸಿದ್ದಾರೆ ಎಂದರು.

ಪ್ರವೀಣ್ ನೆಟ್ಟಾರ್ ಹತ್ಯೆ ಹಿನ್ನೆಲೆಯಲ್ಲಿ ಪಿಎಫ್,ಐ, ಎಸ್.ಡಿ.ಪಿ.ಐ ಸಂಘಟನೆಯವರು ಇಂಥಹ ಕೃತ್ಯದ ಹಿಂದಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ್ದು, ಈ ಸಂಘಟನೆಗಳ ಕೈವಾಡ ಇರುವ ಬಗ್ಗೆ ಹಲವು ಪ್ರಾಥಮಿಕ ಮತ್ತು ಮಾಧ್ಯಮ ವರದಿಗಳಿವೆ. ಇಂಥಹ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದರು.

RELATED ARTICLES

Related Articles

TRENDING ARTICLES