Friday, April 19, 2024

BRP ಡ್ಯಾಂಗೆ ಬಾಗಿನ ಅರ್ಪಣೆ

ಶಿವಮೊಗ್ಗ : ಭದ್ರಾ ಜಲಾಶಯ ಮೈದುಂಬಿ ಹರಿಯುತ್ತಿದ್ದು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣ ಗೌಡ ಬಿ.ಆರ್.ಪಿ. ಡ್ಯಾಂ ನಲ್ಲಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಸಂಸದ ರಾಘವೇಂದ್ರ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಶಾಸಕರಾದ ಅಶೋಕ ನಾಯ್ಕ, ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಮೇಯರ್ ಸುನೀತಾ ಅಣ್ಣಪ್ಪ, ಡಿಸಿ ಡಾ.ಆರ್. ಸೆಲ್ವಮಣಿ, ಎಸ್ಪಿ ಬಿ.ಎಂ. ಲಕ್ಷ್ಮಿಪ್ರಸಾದ್, ಕುವೆಂಪು ವಿವಿ ಪ್ರೊ. ವೀರಭದ್ರಪ್ಪ ಮತ್ತಿತರರು ಭಾಗಿಯಾಗಿದ್ರು. ಬಾಗಿನ ಸಲ್ಲಿಕೆ ನಂತರ ಸಚಿವ ನಾರಾಯಣ ಗೌಡ ಮಾತನಾಡಿ ರಾಜ್ಯದೆಲ್ಲೆಡೆ ಜಲಾಶಯಗಳು ತುಂಬಿವೆ. ಯಡಿಯೂರಪ್ಪ ಸಿಎಂ ಆದ ನಂತರ ಪ್ರತಿವರ್ಷ ರಾಜ್ಯದಲ್ಲಿ ಭರಪೂರ ಮಳೆಯಾಗುತ್ತಿದೆ ಎಂದರು.

RELATED ARTICLES

Related Articles

TRENDING ARTICLES