Friday, May 10, 2024

ಸಿಎಂಗೆ ಕೋವಿಡ್​ ಪಾಸಿಟಿವ್: ದೆಹಲಿ ಪ್ರವಾಸ ರದ್ದು

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ ​ ಸೋಂಕು ದೃಢವಾಗಿದ್ದು, ಕೊವಿಡ್​ ದೃಢಪಟ್ಟ ಬಗ್ಗೆ ಟ್ವೀಟ್​ ಮಾಡಿ ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ.

ತಮ್ಮ ಸಂಪರ್ಕಿತರಿಗೆ ಟೆಸ್ಟ್​ ಮಾಡಿಸಿಕೊಳ್ಳಲು ಸೂಚನೆ ನೀಡಿದ್ದು, ಕೋವಿಡ್​ ಪಾಸಿಟಿವ್ ಹಿನ್ನೆಲೆ ಸಿಎಂ ದೆಹಲಿ ಪ್ರವಾಸ ರದ್ದು ಮಾಡಲಾಗಿದೆ. ಸಂಜೆ ಆಜಾದಿ ಕಾ ಅಮೃತ್ ಮಹೋತ್ಸವದಲ್ಲಿ ಭಾಗಿಯಾಗಬೇಕಿತ್ತು. ನಾಳೆ ನೀತಿ ಆಯೋಗದ ಸಭೆಗೂ ಸಿಎಂ ಭಾಗಿಯಾಗಬೇಕಿತ್ತು. ಆದರೆ ಕೋವಿಡ್​ ಬಂದ ಹಿನ್ನೆಲೆ ರದ್ದು ಮಾಡಲಾಗಿದೆ.

ಸದ್ಯ ಸಿಎಂ ಬೊಮ್ಮಾಯಿ ಹೋಂ ಕ್ವಾರಂಟೈನ್​​ನಲ್ಲಿದ್ದಾರೆ. ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಬರೆದೊಂಡಿದ್ದಾರೆ.

RELATED ARTICLES

Related Articles

TRENDING ARTICLES