Monday, May 20, 2024

ಬೆಂಗಳೂರಲ್ಲಿ ಗಣೇಶೋತ್ಸವಕ್ಕೆ ಗ್ರೀನ್‌ ಸಿಗ್ನಲ್‌

ಬೆಂಗಳೂರು : ಕರ್ನಾಟಕದಲ್ಲಿ ಈ ವರ್ಷ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಹಾಗೂ ಗಣೇಶೋತ್ಸವಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್​ ಹೇಳಿದರು.

ಗಣೇಶೋತ್ಸವದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡಿದ್ದೇನೆ. ರಾಜ್ಯದಲ್ಲಿ ಈ ಹಿಂದೆ ಆಚರಿಸುತ್ತಿದ್ದ ರೀತಿಯಲ್ಲಿಯೇ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲಿದೆ. ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ವಿಗ್ರಹಗಳನ್ನು ಕೂಡಿಸಲು ಗಮನಹರಿಸಬೇಕು ಎಂದು ವಿನಂತಿಸಿದರು.

ಕೋವಿಡ್ ಪಿಡುಗು ರಾಜ್ಯದಲ್ಲಿ ಆವರಿಸಿದ್ದ ಸಂದರ್ಭದಲ್ಲಿ ವಾರ್ಡ್​ಗೆ ಒಂದು ಗಣಪತಿ ಕೂರಿಸಬೇಕು ಎಂದು ಸರ್ಕಾರ ನಿರ್ಬಂಧ ವಿಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು ಎಂದರು.

RELATED ARTICLES

Related Articles

TRENDING ARTICLES