ಬೆಂಗಳೂರು : ಕರ್ನಾಟಕದಲ್ಲಿ ಈ ವರ್ಷ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಹಾಗೂ ಗಣೇಶೋತ್ಸವಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಗಣೇಶೋತ್ಸವದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡಿದ್ದೇನೆ. ರಾಜ್ಯದಲ್ಲಿ ಈ ಹಿಂದೆ ಆಚರಿಸುತ್ತಿದ್ದ ರೀತಿಯಲ್ಲಿಯೇ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲಿದೆ. ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ವಿಗ್ರಹಗಳನ್ನು ಕೂಡಿಸಲು ಗಮನಹರಿಸಬೇಕು ಎಂದು ವಿನಂತಿಸಿದರು.
ಕೋವಿಡ್ ಪಿಡುಗು ರಾಜ್ಯದಲ್ಲಿ ಆವರಿಸಿದ್ದ ಸಂದರ್ಭದಲ್ಲಿ ವಾರ್ಡ್ಗೆ ಒಂದು ಗಣಪತಿ ಕೂರಿಸಬೇಕು ಎಂದು ಸರ್ಕಾರ ನಿರ್ಬಂಧ ವಿಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು ಎಂದರು.