Sunday, May 12, 2024

ದ. ಕನ್ನಡ ಜಿಲ್ಲೆಯಲ್ಲಿ ನೈಟ್​ ಕರ್ಫ್ಯೂ ತೆರವು

ಮಂಗಳೂರು : ಪ್ರವೀಣ್​​​ ನೆಟ್ಟಾರು ಹತ್ಯೆ ಬಳಿಕ ದಕ್ಷಿಣ ಕನ್ನಡದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ಸೆಕ್ಷನ್​​ 144 ಸೇರಿದಂತೆ ನೈಟ್​​​ ಕರ್ಫೂವನ್ನು ತೆರವುಗೊಳಿಸಿದ್ದಾರೆ.

ಇದೀಗ ಪ್ರವೀಣ್​​​ ನೆಟ್ಟಾರಿ ಹತ್ಯೆಗೈದ ಕೊಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಮಂಗಳೂರು ಸಹಜ ಸ್ಥಿತಿಗೆ ಮರಳುತ್ತಿದೆ. ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈಟ್​ ಕರ್ಫ್ಯೂ ತೆರವು ಮಾಡಲಾಗಿದೆ. ಇಂದಿನಿಂದಲೇ ಆದೇಶ ಜಾರಿಗೆ ಬರುವಂತೆ ಜಿಲ್ಲಾಧಿಕಾರಿ ರಾಜೇಂದ್ರ ಸೂಚನೆ ನೀಡಿದ್ದಾರೆ. ಆದರೆ ಜಿಲ್ಲೆಯಲ್ಲಿ ಆಗಸ್ಟ್​ 14ರವರೆಗೆ ಸೆಕ್ಷನ್ 144​​​ ಮುಂದುವರಿಕೆ ಮಾಡಲಾಗಿದೆ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES