Monday, May 20, 2024

ಧರ್ಮ ಸಂಘರ್ಷಗಳಿಗೆ ಜ್ಞಾನದ ಕೊರತೆ ಮುಖ್ಯ ಕಾರಣ : ಕೋಡಿಶ್ರೀ

ಶಿವಮೊಗ್ಗ : ಮತಾಂಧತೆಯಿಂದಾಗಿ ಧರ್ಮ ಸಂಘರ್ಷಗಳು ನಡೆಯುತ್ತಿದ್ದು, ನೈಜ ಜ್ಞಾನದ ಕೊರತೆಯೇ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉಲ್ಬಣಗೊಳ್ಳಲಿದೆ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಜಡೆ ಸಂಸ್ಥಾನ ಮಠದ ಆವರಣದಲ್ಲಿ ಜೀರ್ಣೋದ್ಧಾರವಾಗುತ್ತಿರುವ ಶ್ರೀ ಕುಮಾರ ಕಂಪಿನ ಸಿದ್ಧವೃಷಭೇಂದ್ರ ಕತೃ ಗದ್ದುಗೆಯ ಶಿಲಾಮಯ ಕಟ್ಟಡದ ಕಾಮಗಾರಿ ವೀಕ್ಷಿಸಿ, ಕತೃ ಗದ್ದುಗೆಯ ದರ್ಶನ ಪಡೆದು ಅವರು ಮಾತನಾಡಿದ್ದಾರೆ.

ದೇಶದಲ್ಲಿ ನಡೆಯುತ್ತಿರುವ ಧರ್ಮ ಸಂಘರ್ಷಗಳಿಗೆ ಜ್ಞಾನದ ಕೊರತೆ ಮುಖ್ಯ ಕಾರಣವಾಗಿದೆ. ಇದರಿಂದ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತಿದೆ. ಶುಭಕೃತ ನಾಮಸಂವತ್ಸರವು ದೇಶದಲ್ಲಿ ಅಶುಭವನ್ನುಂಟು ಮಾಡಲಿದೆ. ಮಠದಲ್ಲಿ ಪಂಚಾಗ್ನಿ ಮಾಡುವ ಸಂದರ್ಭದಲ್ಲಿ ಅಗ್ನಿಕುಂಡ ಒಡೆದು ಗಾಯ ಮಾಡಿತು. ಪೂರ್ಣ ಪ್ರಮಾಣದಲ್ಲಿ ಪೂಜೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ನಾಡಿನಲ್ಲಿ ಬೆಂಕಿ ಅನಾಹುತ ಸಂಭವಿಸುವ ಲಕ್ಷಣವಿದೆ ಎಂದೆನಿಸುತ್ತದೆ. ಕಾರ್ತಿಕ ಮಾಸದಲ್ಲಿ ಪ್ರಾಕೃತಿಕ ವಿಕೋಪಗಳು ಹೆಚ್ಚಾಗಲಿದ್ದು, ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷಗಳು ಇಬ್ಬಾಗವಾಗುವ ಸಂಭವವಿದೆ. ಹಿಂಗಾರು ಮಳೆ ಕಡಿಮೆಯಾಗಿ ಅಕಾಲಿಕ ಮಳೆಯಾಗಲಿದೆ, ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ ಎಂದು ಭವಿಷ್ಯ ನುಡಿದಿದ್ದಾರೆ.

ದೇಶದಲ್ಲಿ ಸಾಧು-ಶರಣರಿಗೆ ವಿಶೇಷವಾದ ಸ್ಥಾನ ನೀಡಲಾಗಿದ್ದು, ಜಗತ್ತಿನ ಕಲ್ಯಾಣ ಬಯಸುವುದು ಅವರ ಧರ್ಮವಾಗಿದೆ. ಪವಿತ್ರ ಕ್ಷೇತ್ರವಾದ ಜಡೆ ಸಂಸ್ಥಾನ ಮಠವು ಆಧ್ಯಾತ್ಮದ ನೆಲೆವೀಡಾಗಿದೆ. ಶ್ರೀ ಸಿದ್ಧವೃಷಭೇಂದ್ರದ ಕತೃ ಗದ್ದುಗೆ ಪವಾಡ ಅಪಾರವಾಗಿದ್ದು, ನಿರ್ವಿಕಲ್ಪವಾಗಿ ನೆಲೆಸಿದ್ದಾರೆ. ಶ್ರೀ ಮಹಾಂತ ಸ್ವಾಮೀಜಿಯವರು ಶ್ರೀ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತಿದ್ದಾರೆ. ಯೋಗದಲ್ಲಿ ಸಾಕಷ್ಟು ಸಾಧನೆ ಮಾಡಿರುವ ಶ್ರೀಗಳಿಗೆ ದೇಶ ವಿದೇಶಗಳಿಂದಲೂ ಆಹ್ವಾನಗಳು ಬರುತ್ತಿರುವುದು ಸಾಕ್ಷಿಯಾಗಿದೆ. ಮುಂಬರುವ ಏಪ್ರೀಲ್ ತಿಂಗಳಿನಲ್ಲಿ ಅಮೇರಿಕಾದಲ್ಲಿಯೂ ಯೋಗ ತರಬೇತಿ ಮತ್ತು ಪ್ರದರ್ಶನ ನೀಡಲಿದ್ದಾರೆ ಎಂದು ಕೋಡಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

RELATED ARTICLES

Related Articles

TRENDING ARTICLES