Thursday, April 18, 2024

ಮರುಘಾ ಮಠದ ‘ಬಸವಶ್ರೀ’ ಪ್ರಶಸ್ತಿ ವಾಪಸ್​ ನೀಡಿದ ಪಿ.ಸಾಯಿನಾಥ್

ನವದೆಹಲಿ: ಚಿತ್ರದುರ್ಗ ಮರುಘಾ ಮಠದ ವತಿಯಿಂದ ನೀಡಿದ್ದ ಬಸವಶ್ರೀ ಪ್ರಶಸ್ತಿಯನ್ನ ಮರಳಿ ಪತ್ರಕರ್ತ ಪಿ.ಸಾಯಿನಾಥ್ ಅವರು ವಾಪಸ್​ ನೀಡಿದ್ದಾರೆ.

2017 ರಲ್ಲಿ ಮರುಘಾ ಮಠದ ವತಿಯಿಂದ ಪತ್ರಕರ್ತ ಪತ್ರಕರ್ತ ಪಿ.ಸಾಯಿನಾಥ್ ಅವರಿಗೆ ಬಸವಶ್ರೀ ಪ್ರಶಸ್ತಿಯನ್ನ ನೀಡಿತ್ತು. ಸದ್ಯ ಲೈಂಗಿಕ ದೌರ್ಜನ್ಯ ಆರೋಪದ ಅಡಿ ಬಂಧನವಾಗಿರುವ ಮುರುಘಾ ಮಠದ ಶ್ರೀಗಳ ನಡೆಯ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದ್ದರು.

ಮುರುಘಾ ಮಠದಿಂದ ಕೊಡಮಾಡುವ ಬಸವಶ್ರೀ ಪ್ರಶಸ್ತಿಯು 5 ಲಕ್ಷ ರೂ ನಗದು, ಪ್ರಮಾಣಪತ್ರ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿತ್ತು. ಬಸವೇಶ್ವರ ಅವರ ತತ್ವಗಳನ್ನ ಕಾಪಾಡಿಕೊಂಡು ಹೋಗುವ ಸಲುವಾಗಿ ಈ ಪ್ರಶಸ್ತಿ ನೀಡಲಾಗುತ್ತಿತ್ತು.

ಚಿತ್ರದುರ್ಗದ ಶ್ರೀ ಮುರುಘಾಮಠದ ಮಠಾಧೀಶರಾದ ಶ್ರೀ ಶಿವಮೂರ್ತಿ ಮುರುಘಾ ಶರಣರು ಭಾಗಿಯಾಗಿರುವ ಭೀಕರ ಬೆಳವಣಿಗೆಗಳ ಮಾಧ್ಯಮ ವರದಿಗಳಿಂದ ತಿಳಿದು ನಾನು ಹೆಚ್ಚು ವಿಚಲಿತನಾಗಿದ್ದೇನೆ. ಅವರು ಈಗ ಪೋಕ್ಸೊ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಮಕ್ಕಳ ಮೇಲೆ, ವಿಶೇಷವಾಗಿ ಪ್ರೌಢಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ. ಮಕ್ಕಳ ಮೇಲಿನ ಯಾವುದೇ ರೀತಿಯ ಅಪರಾಧಗಳನ್ನು ಖಂಡಿಸಲು ಯಾವುದೇ ಪದಗಳು ಬಲವಾಗಿಲ್ಲ.

ಈ ಪ್ರಕರಣದಲ್ಲಿ ಬದುಕುಳಿದವರ ಒಗ್ಗಟ್ಟಿನಿಂದ ಮತ್ತು ನ್ಯಾಯಕ್ಕಾಗಿ 2017 ರಲ್ಲಿ ಮಠವು ನನಗೆ ನೀಡಿದ ಬಸವಶ್ರೀ ಪ್ರಶಸ್ತಿಯನ್ನು (ಮತ್ತು ಅದರೊಂದಿಗೆ ಬಂದ 5 ಲಕ್ಷ ರೂ. ಬಹುಮಾನದ ಮೊತ್ತವನ್ನು ಚೆಕ್ ಮೂಲಕ) ಹಿಂದಿರುಗಿಸುತ್ತೇನೆ ಎಂದು ಪಿ. ಸಾಯಿನಾಥ್ ಹೇಳಿದ್ದಾರೆ.

RELATED ARTICLES

Related Articles

TRENDING ARTICLES