Friday, May 17, 2024

ಡಿವೈಎಸ್ಪಿ ಕಾರು ಅಲ್ಲಾಡಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು

ಚಿಕ್ಕಮಗಳೂರು: ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್​ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದಲ್ಲಿ ನಡೆದಿದೆ.

ಕಾಡು ಆನೆ ದಾಳಿಯಿಂದ ಅರ್ಜುನ ಎಂಬ ವ್ಯಕ್ತಿ ಮೃತಪಟ್ಟಿದ್ದ, ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ ಮಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದ ಹಾಗೆ ಪ್ರತಿಭಟನೆ ಬೇರೆ ಸ್ವರೂಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್​ ಮಾಡಿದ್ದಾರೆ.

ಹಲವು ತಿಂಗಳಿನಿಂದ ಕಾಡಾನೆ ದಾಳಿ ನಡೆಯುತ್ತಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಮೊಂಡತನ ಪ್ರದರ್ಶಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿ ಪ್ರತಿಭಟನೆ ಮಾಡುತ್ತಿದ್ದರು. ಇನ್ನು ಲಾಠಿ ಚಾರ್ಜ್​ ಆಗುತ್ತಿದ್ದಂತೆ ಪ್ರತಿಭಟನಾಕಾರರು ಡಿವೈಎಸ್​ಪಿ ಕಾರನ್ನ ಅಲುಗಾಡಿಸಿದ್ದಾರೆ.

RELATED ARTICLES

Related Articles

TRENDING ARTICLES