Monday, May 13, 2024

ಹಿಂದು ಕಾರ್ಯಕರ್ತನಿಗೆ ಬೆದರಿಕೆ; ಆರೋಪಿ ಶಫೀಕ್​ ಬಂಧನ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಶಫೀಕ್ ತಮ್ಮನಿಂದ ಮತ್ತೊಬ್ಬನಿಗೆ ಜೀವ ಬೆದರಿಕೆ ಹಿನ್ನಲೆಯಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ.

ಇತ್ತೀಚಿಗೆ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫೀಕ್ ಸಹೋದರ ಹಿಂದು ಸಂಘಟನೆ ಕಾರ್ಯಕರ್ತ ಪ್ರಶಾಂತ್ ಪೂಂಜ ಎಂಬಾತನಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ, ಈ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಳ್ಳಾರೆಯ ಪೊಲೀಸ್ ಠಾಣೆಯ ಎದುರು ನಿನ್ನೆ ರಾತ್ರಿ ಹಿಂದೂ ಪರ ಕಾರ್ಯಕರ್ತರು ನೆರೆದು ಕ್ರಮಕ್ಕೆ ಆಗ್ರಹಿಸಿದ್ದರು.

ಹಿಂದೂ ಕಾರ್ಯಕರ್ತನಿಗೆ ಬೆದರಿಕೆ ಒಡ್ಡಿದ ಬೆಳ್ಳಾರೆ ನಿವಾಸಿ ಅಬ್ದುಲ್ ಅಫ್ರಿದ್ ಎಂಬಾತನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

RELATED ARTICLES

Related Articles

TRENDING ARTICLES