Friday, May 10, 2024

ಇಡಿ ತೂಗುಯ್ಯಾಲೆಯಲ್ಲಿ ಡಿಕೆಶಿ: ಕೆಪಿಸಿಸಿ ಅಧ್ಯಕ್ಷನಿಗೆ ಬಿಗ್​ ಶಾಕ್​.!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಇಡಿ ಸಮನ್ಸ್​ ನೀಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ ನೀಡಿದೆ ಎಂದು ಡಿಕೆಶಿ ಹೇಳಿಕೊಂಡಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್​ ವಿಚಾರಣೆ ಎದುರಿಸಿ ಬಂಧನವಾಗುವ ಸಾಧ್ಯತೆ ಎದುರಾಗಿದೆ.

ಭಾರತ್ ಜೋಡೋ, ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್‌ ನೀಡಿದೆ. ನಾನು ಸಹಕರಿಸಲು ಸಿದ್ಧ ಎಂದಿದ್ದಾರೆ. ಆದರೆ, ಈ ಸಮನ್ಸ್‌ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಹೇಳಿದ್ದಾರೆ.

ವಿಚಾರಣೆಗೆ ಹಾಜರಾದ ವೇಳೆ ಡಿಕೆ ಶಿವಕುಮಾರ್​ ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿದಾರರು ಎಂದು ಸಾಬೀತಾದರೆ ಡಿಕೆ ಶಿವಕುಮಾರ್​ ಮತ್ತೊಮ್ಮೆ ಜೈಲು ವಾಸ ಅನುಭವಿಸುತ್ತಾರೆ.

 

RELATED ARTICLES

Related Articles

TRENDING ARTICLES