Saturday, May 18, 2024

ಬೈಕ್‌ಗೆ ಕಾರು ಡಿಕ್ಕಿ. ಇಬ್ಬರ ಸಾವು

ಮೈಸೂರು : ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ಮತ್ತು ಹಿಂಬದಿಯ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದ ವಿದ್ಯಾಪೀಠ ಬಳಿ ನಡೆದಿದೆ.

ಮಹೇಶ್, ಹಾಗೂ ಮಹದೇವಪ್ಪ ಮೃತ ದುರ್ದೈವಿಗಳಾಗಿದ್ದು, ಮೃತರು ಚಾಮರಾಜನಗರ ತಾಲೂಕಿನ ಹೆಗ್ಗೋಠರ ಗ್ರಾಮದವರಾಗಿದ್ದಾರೆ. ಮೈಸೂರಿನಿಂದ ಗಾರೆ ಕೆಲಸ ಮುಗಿಸಿಕೊಂಡು ಬರುವಾಗ ಎದುರುಗಡೆಯಿಂದ ಬಂದ ಕಾರಿನ ಚಾಲಕ ಅತಿವೇಗ ಹಾಗೂ ಅಜಾಗರುಕತೆಯಿಂದ ಚಾಲನೆ ಮಾಡಿಕೊಂಡು ಬಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಕೆಳಗಡೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES