Monday, May 20, 2024

ಪೌರ ಕಾರ್ಮಿಕರು ಇನ್ಮುಂದೆ ಸರ್ಕಾರಿ ನೌಕರರು : ನಳಿನ್‍ಕುಮಾರ್ ಕಟೀಲ್

ಬೆಂಗಳೂರು : ನಗರಸಭೆ, ಪುರಸಭೆ ಮತ್ತು ಇತರೆ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ನಿನ್ನೆ ಅನುಮೋದನೆ ನೀಡಿದೆ. ಈ ಮೂಲಕ ಕಾಮನ್ ಮ್ಯಾನ್ ಮುಖ್ಯಮಂತ್ರಿ ಎಂದೇ ಜನಮೆಚ್ಚುಗೆ ಪಡೆದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ರಾಜ್ಯ ಸರ್ಕಾರವು ಬಡವರ ಪರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್​ ಹೇಳಿದ್ದಾರೆ.

ಸಾಮಾಜಿಕ ನ್ಯಾಯದ ದಿಗ್ವಿಜಯ ಯಾತ್ರೆಯನ್ನು ಕರ್ನಾಟಕದ ಬಿಜೆಪಿ ಸರಕಾರ ಮುಂದುವರಿಸಿದೆ. ಈ ಪ್ರಸ್ತಾವಕ್ಕೆ ಅನುಮೋದನೆ ನೀಡಿದ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸದಸ್ಯರೆಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳು. ಈ ನೌಕರರು ಈಗ ರೂ.17,000-28,980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ. 11,133 ಪೌರ ಕಾರ್ಮಿಕ ಖಾಯಮಾತಿಯಾಗಿದ್ದು ರಾಜ್ಯದ ಇತಿಹಾಸದಲ್ಲಿದು ಮೊದಲ ಬಾರಿ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES