Friday, May 17, 2024

ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿ, ಫ್ಲೆಕ್ಸ್ ಹರಿದ ದುಷ್ಕರ್ಮಿಗಳು

ಚಾಮರಾಜನಗರ : ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ‌ ಚಾಮರಾಜನಗರ ಜಿಲ್ಲೆಗೆ ಪಾದಯಾತ್ರೆ ಮೂಲಕ ಬರುತ್ತಿರುವ ಹಿನ್ನಲೆಯಲ್ಲಿ ಗುಂಡ್ಲುಪೇಟೆಯಲ್ಲಿ ರಾಹುಲ್, ಸಿದ್ದು, ಡಿಕೆ, ಫ್ಲೆಕ್ಸ್​ಗಳನ್ನು, ದುಷ್ಕರ್ಮಿಗಳು ಹರಿದು ಹಾಕಿದ್ದಾರೆ.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಹಮ್ಮಿಕೊಂಡಿರುವ ಭಾರತ್ ಜೋಡೋ‌ ಯಾತ್ರೆ. ಸೆ.30ರಂದು ಗುಂಡ್ಲುಪೇಟೆ ಮೂಲಕ ರಾಜ್ಯ ಪ್ರವೇಶಿಸುತ್ತಿದೆ. ಈ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಅಳವಡಿಸಿದ್ದ ನಾಯಕರ ಫ್ಲೆಕ್ಸ್​ಗಳು. ಗುರುವಾರ ಬೆಳಗ್ಗಿನ ಜಾವ ದುಷ್ಕರ್ಮಿಗಳು ಹರಿದು ಹಾಕಿದ್ದಾರೆ.

ಇನ್ನು, ಗುಂಡ್ಲುಪೇಟೆ ಪಟ್ಟಣದಲ್ಲಿ ಸುರಭಿ‌ ಹೋಟೇಲ್‌ನಿಂದ ಊಟಿ ರಸ್ತೆಯ ಉದ್ದಕ್ಕೂ ಅಳವಡಿಸಿದ್ದ ಫ್ಲೆಕ್ಸ್​ಗಳನ್ನು, ಕಿಡಿಗೇಡಿಗಳು ಹರಿದುಹಾಕಿದ್ದಾರೆ. ಗುಂಡ್ಲುಪೇಟೆ ಕಾಂಗ್ರೆಸ್ ‌ಮುಖಂಡ ಗಣೇಶ್ ಪ್ರಸಾದ್ ಫ್ಲೆಕ್ಸ್ ಹರಿದು ಹಾಕಿರುವವರು ಬಿಜೆಪಿಯವರು ಎಂದು ಆರೋಪ ಮಾಡಿದ್ದು, ಇದಕ್ಕೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಅವರ ಶಿಷ್ಯ ಪ್ರಣಯ್ ಕುಮ್ಮಕ್ಕು ನೀಡಿದ್ದಾರೆ ಎಂದು ಗಣೇಶ ಪ್ರಸಾದ್ ಆರೋಪಿಸಿದ್ದಾರೆ.

RELATED ARTICLES

Related Articles

TRENDING ARTICLES