Friday, May 17, 2024

ಸಮವಸ್ತ್ರ ಪಾಲನೆ ಮಾಡಬೇಕು : ಆರ್​ ಅಶೋಕ್​

ಬೆಂಗಳೂರು : ಕಂದಾಯ ಸಚಿವ ಆರ್​.ಅಶೋಕ್ ಹಿಜಾಬ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಬಗ್ಗೆ ಸರ್ಕಾರದ ನಿಲುವಿನಲ್ಲಿ ಬದಲಾವಣೆ ಇಲ್ಲ, ಸರ್ಕಾರಿ ಶಾಲೆಗೆ ಬರುವವರು ಸಮವಸ್ತ್ರ ಪಾಲನೆ ಮಾಡಬೇಕು. ಇದು ಸರ್ವಪಾಲನಾ ನಿಯಮವಾಗಿದೆ ಎಂದು ತಿಳಿಸಿದ್ರು. ಈ ನಿಯಮದ ವಿರುದ್ಧವಾಗಿ ಕೆಲವು ವಿದ್ಯಾರ್ಥಿಗಳು ಹೈಕೋರ್ಟ್​​​​ಗೆ ಹೋಗಿದ್ದರು. ಆದರೆ ಹೈಕೋರ್ಟ್ ತೀರ್ಪು ಸರ್ಕಾರದ ಪರವಾಗಿ ಬಂದಿತ್ತು.

ಇದೀಗ ಸುಪ್ರೀಂ ಕೋರ್ಟ್​​​​ನಲ್ಲಿ ಭಿನ್ನ ತೀರ್ಪು ಬಂದಿದೆ. ಈಗ ಪ್ರಕರಣ CJIಗೆ ವರ್ಗಾವಣೆ ಆಗಿದೆ. ಅಲ್ಲಿ ಕೂಡ ಸರ್ಕಾರದ ನಿಲುವು ಹಿಜಾಬ್​​​ ವಿರುದ್ಧವೇ ಆಗಿರುತ್ತದೆ ಎಂದ್ರು. ವಿದ್ಯಾರ್ಥಿಗಳು ಮನೆಯಲ್ಲಿ ಏನು ಬೇಕಾದರೂ ವಸ್ತ್ರ ಹಾಕಲಿ, ಆದರೆ ಶಾಲೆಗೆ ಬರುವಾಗ ಸಮವಸ್ತ್ರ ಕಡ್ಡಾಯವಾಗಿದೆ. ಖಾಸಗಿ ಶಾಲೆಗಳಲ್ಲಿ ಸಮವಸ್ತ್ರ ಕೋಡ್ ಇದೆ ಅದರ ಪಾಲನೆ ನಡೆಯುತ್ತಿದೆ. ಇರಾನ್​​ನಲ್ಲಿ ಏನು ನಡೆಯುತ್ತಿದೆ, ಅಲ್ಲಿ ಮಹಿಳೆಯರು ಹಿಜಾಬ್ ಕಿತ್ತು ಬಿಸಾಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.

RELATED ARTICLES

Related Articles

TRENDING ARTICLES