Friday, April 19, 2024

‘ಕಾಂತಾರ’ ಚಿತ್ರ ವೀಕ್ಷಿಸಿದ ಶಾಮನೂರು ಶಿವಶಂಕರಪ್ಪ

ದಾವಣಗೆರೆ; ಕನ್ನಡದ ಕಾಂತಾರ ಸಿನಿಮಾ ದೇಶ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ರಿಷಬ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿದ ಸಿನಿಮಾಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ನಿನ್ನೆ ಡಾ. ವೀರೇಂದ್ರ ಹೆಗ್ಗಡೆ ಅವರು ಚಿತ್ರ ನೋಡಿ ಮೆಚ್ಚುಗೆ ನುಡಿಗಳನ್ನಾಡಿದ್ದರು.

ಅದರಂತೆ ಇಂದು ದಾವಣಗೆರೆ ನಗರದ ಎಸ್​ಎಸ್​ ಮಾಲ್​ನಲ್ಲಿ ಕಾಂತಾರ ಸಿನಿಮಾವನ್ನ ಕಾಂಗ್ರೆಸ್​ ಹಿರಿಯ ನಾಯಕ, ಶಾಸಕ ಶಾಮನೂರು ಶಿವಶಂಕರಪ್ಪ ವೀಕ್ಷಣೆ ಮಾಡಿದರು.

ಈ ಇಳಿವಯಸ್ಸಿನಲ್ಲೂ ಶಾಮನೂರು ಶಿವಶಂಕರಪ್ಪ ಅವರು ಸ್ನೇಹಿತರಾದ ಅಥಣಿ ವೀರಣ್ಣ, ಎಂಜಿ ಈಶ್ವರಪ್ಪ ಅವರೊಂದಿಗೆ ಸೇರಿ ಥೇಟರ್​ಗೆ ಬಂದು ಸಿನಿಮಾ ವೀಕ್ಷಿಸಿದ್ದನ್ನ ಕಂಡು ಎಲ್ಲರನ್ನ ಬೆರಗುಗೊಳಿಸಿತು.

ಅಲ್ಲದೇ ದಾವಣಗೆರೆ ಜಿಲ್ಲೆಯ ಪೊಲೀಸ್ ಇಲಾಖೆಯ 200ಕ್ಕೂ ಹೆಚ್ಚು ಸಿಬ್ಬಂದಿ ಕಾಂತಾರ ಸಿನಿಮಾ ನೋಡಿ ಖುಷಿಪಟ್ಟಿದ್ದಾರೆ. ಪೊಲೀಸ್ ಸಿಬ್ಬಂದಿ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾ ನೋಡಿ ಖುಷಿಪಟ್ಟಿದ್ದಾರೆ.

RELATED ARTICLES

Related Articles

TRENDING ARTICLES