Monday, May 13, 2024

‘ಕರ್ನಾಟಕ ರತ್ನ’ ಸಮಾರಂಭ ವಿಧಾನಸೌಧಕ್ಕೆ ಆಗಮಿಸಿದ ರಜನಿ, ಎನ್​ಟಿಆರ್​​​

ಬೆಂಗಳೂರು; ದಿವಂಗತ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ ನೀಡುತ್ತಿರುವ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ಇಂದು ವಿಧಾನಸೌಧದಲ್ಲಿ ನಡೆಯುತ್ತಿದೆ.

ಈ ಕಾರ್ಯಕ್ರಮಕ್ಕೆ ತಮಿಳು ನಟ ಸೂಪರ್​ ಸ್ಟಾರ್​ ರಜನಿ ಕಾಂತ್​, ತೆಲಗು ನಟ ಎನ್​ಟಿಆರ್​ ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ ವಿಧಾನಸೌಧಕ್ಕೆ ಇಂದು ಆಗಮಿಸಿದರು.

ಈ ವೇಳೆ ಸೂಪರ್​ ಸ್ಟಾರ್​ ರಜನಿ ಕಾಂತ್​ ಕನ್ನಡದಲ್ಲಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದರು. ಹಾಗೂ ಎನ್​ಟಿಆರ್​ ಕನ್ನಡದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿಯೇ ಮಾತನಾಡುತ್ತೇನೆ ಎಂದರು. ಆರೋಗ್ಯ ಸಚಿವ ಡಾ.ಕೆ ಸುಧಾಕರ್​ ಅವರು ಸಾಥ್​ ನೀಡಿದರು.

RELATED ARTICLES

Related Articles

TRENDING ARTICLES