Thursday, September 19, 2024

ಚಿಕ್ಕಮಗಳೂರು: ದಲಿತ ಸಂಘಟನೆ ಮುಖಂಡರ ಬಂಧನ

ಚಿಕ್ಕಮಗಳೂರು: ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿದ್ದ ದಲಿತ ಸಂಘಟನೆ ಮುಖಂಡರ ಬಂಧನವಾಗಿದೆ. ಕೂಲಿ ಕಾರ್ಮಿಕರ ಮೇಲೆ ಹಲ್ಲೆ, ದೌರ್ಜನ್ಯ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ.

ಕನ್ನಡ ರಾಜ್ಯೋತ್ಸವದ ಮೆರವಣಿಗೆ ವೇಳೆ ದಲಿತ ಸಂಘಟನೆಗಳಿಂದ ಜಿಲ್ಲಾಡಳಿತದ ವಿರುದ್ದ ಘೋಷಣೆ ಕೂಗಿದ್ದು, ಹಲ್ಲೆ, ದೌರ್ಜನ್ಯ ನಡೆಸಿದ ಆರೋಪಿಯನ್ನು ಬಂಧಿಸದ ಪ್ರತಿಭಟನೆ, ನಗರದ ಆಜಾದ್ ಪಾರ್ಕ್ ವೃತ್ತಕ್ಕೆ ಆಗಮಿಸುತ್ತಿದ್ದ ವೇಳೆ ಜಿಲ್ಲಾಡಳಿತ ಹಾಗೂ ಶಾಸಕರ ವಿರುದ್ಧ ಧಿಕ್ಕಾರ. ಜಿಲ್ಲಾಡಳಿತ, ಶಾಸಕರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಲು ಸಿದ್ದತೆ ನಡೆಸಿದ ಹಿನ್ನೆಲೆಯಲ್ಲಿ, ಮುಂಜಾಗರತ ಕ್ರಮವಾಗಿ ಪ್ರತಿಭಟನಾನಿರತರ ಬಂಧನವಾಗಿದೆ.

ದಲಿತ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು. 20ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದ ಪೊಲೀಸರು,
ಕಳೆದ ಐದು ದಿನಗಳಿಂದ ನಗರದ ಆಜಾದ್ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆ, ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES