Saturday, May 18, 2024

ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ : ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗದ ದುಮ್ಮಳ್ಳಿ ಗ್ರಾಮದಲ್ಲಿ ನಡೆದಿದೆ.

ಶೋಭ(50) ಕೊಲೆಯಾದ ಮಹಿಳೆ. ಪ್ರಕಾಶ ಎಂಬಾತನಿಂದ ಹೆಂಡತಿ ಶೋಭ ಕೊಲೆಯಾಗಿದ್ದು, ಶೋಭಾಗೆ ರಾಡಿನಿಂದ ಹಲ್ಲೆ ನಡೆಸಿರುವ ಪ್ರಕಾಶ್, ಬಳಿಕ ಚಾಕುವಿನಿಂದ ಇರಿದು ಕೊಲೆಯಾಗಿದೆ.

ದುಮ್ಮಳ್ಳಿಯಲ್ಲಿ ಹಾಲಿನ ಅಂಗಡಿ ನಡೆಸುತ್ತಿದ್ದ ಶೋಭಾ. ಪತಿಯೊಂದಿಗೆ ಸಂಸಾರದಲ್ಲಿ ಸರಿ ಬಾರದ ಕಾರಣ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಶೋಭಾ. ಇಬ್ಬರ ನಡುವಿನ ವೈಮನಸ್ಸಿನಲ್ಲಿ ಶೋಭಾ ತನ್ನ ಪತಿ ವಿರುದ್ಧ ದೂರು ದಾಖಲಿಸಿದ್ದರು.

ಇನ್ನು, ದೂರು ವಾಪಾಸ್ ತೆಗೆದುಕೊಳ್ಳುವಂತೆ ಪತಿ ಅನೇಕ ಬಾರಿ ಪತ್ನಿಗೆ ಎಚ್ಚರಿಕೆ ನೀಡಿದ್ದ. ಮಾತು ಕೇಳದ ಹಿನ್ನೆಲೆಯಲ್ಲಿ ಕೊಲೆ ಕೊಲೆ ಮಾಡಿದ್ದಾನೆ.

RELATED ARTICLES

Related Articles

TRENDING ARTICLES