Saturday, September 21, 2024

ರಾಜ್ಯ ಒಕ್ಕಲಿಗರ ಸಂಘದಿಂದ ವಿದ್ಯಾರ್ಥಿಗಳ ಉಚಿತ ವಸತಿ ನಿಲಯ ಉದ್ಘಾಟನೆ..!

ಹಾಸನ: ಹಾಸನದಲ್ಲಿ ರಾಜ್ಯ ಒಕ್ಕಲಿಗರ ಸಂಘದಿಂದ ವಿದ್ಯಾರ್ಥಿಗಳ ಉಚಿತ ವಸತಿ ನಿಲಯ ಉದ್ಘಾಟನೆ. ಹಾಸನ ನಗರದ ಅರಸೀಕೆರೆ ರಸ್ತೆಯ ಎಸ್.ಬಿ.ಎಂ‌ ಬಡಾವಣೆಯಲ್ಲಿ ಬಹುಮಹಡಿ ಕಟ್ಟಡದ ಹಾಸ್ಟಲ್ ಉದ್ಘಾಟನೆ.

ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ವೇದಿಕೆ ಕಾರ್ಯಕ್ರಮಕ್ಕೆ ಸಚಿವ ಗೋಪಾಲಯ್ಯ ಚಾಲನೆ ನೀಡಿದ್ದಾರೆ. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿದ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ. ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಅದ್ಯಕ್ಷ ಶಾಸಕ ಸಿಎನ್ ಬಾಲಕೃಷ್ಣ, ಶಾಸಕರುಗಳಾದ ಶಿವಲಿಂಗೇಗೌಡ, ಎಟಿ ರಾಮಸ್ವಾಮಿ ಸೇರಿ ಹಲವರು ಭಾಗಿಯಾಗಿದ್ದರು. ಆದಿ ಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಶ್ರೀಗಳ ಸಾನ್ನಿದ್ಯದಲ್ಲಿ ನಡೆಯುತ್ತಿರೊ ಕಾರ್ಯಕ್ರಮ.

RELATED ARTICLES

Related Articles

TRENDING ARTICLES