ಹುಬ್ಬಳ್ಳಿ:ಗುಂತಕಲ್-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನ ಸಾಮಾನ್ಯ ಬೋಗಿಯಲ್ಲಿ ಗುರುವಾರ ತಡರಾತ್ರಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಸಿದ್ದಾರೂಢ ರೇಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ.
ರೈಲು ತಡರಾತ್ರಿ ಬ್ಯಾಹಟ್ಟಿಗೆ ಬಂದಾಗ ವ್ಯಕ್ತಿಯ ಕೊಲೆಯಾಗಿರುವುದು ಕಂಡುಬಂದಿದ್ದು, ಸ್ಥಳಕ್ಕೆ ರೈಲ್ವೆ ಪೊಲೀಸರು ತೆರಳಿ ಪರಿಶೀಲಿಸಿದ್ದಾರೆ. ರೈಲಿನ ಸಿಬ್ಬಂದಿಯು ಆ ಬೋಗಿಯನ್ನು ಪ್ರತ್ಯೇಕಿಸಿ ಬ್ಯಾಹಟ್ಟಿಯಲ್ಲೇ ನಿಲ್ಲಿಸಿದ್ದಾರೆ. 45 ವರ್ಷದ ವ್ಯಕ್ತಿಯ ಬರ್ಬರ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಚಾಕು ಇರಿದು ಬರ್ಬರ ಕೊಲೆ ಮಾಡಿ ಪರಾರಿಯಾಗಿರೋ ದುಷ್ಕರ್ಮಿಗಳು.ರೇಲ್ವೆ ಬೋಗಿಯಲ್ಲಿಯೇ ರಕ್ತದ ಮಡುವಿನಲ್ಲಿ ಬಿದ್ದು ಪ್ರಾಣ ಬಿಟ್ಟ ವ್ಯಕ್ತಿ. ಕೊಲೆಯಾದ ವ್ಯಕ್ತಿ ಯಾರು ಹಾಗೂ ಯಾವ ಕಾರಣಕ್ಕಾಗಿ ಯಾರು ಹತ್ಯೆಗೈದಿದ್ದಾರೆಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.