ಬೆಂಗಳೂರು: ಕೆಂಪೇಗೌಡ ಪ್ರತಿಮೆ ಅನಾವರಣ ಹಿನ್ನೆಲೆ ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸಂಪೂರ್ಣ ಕೇಸರಿ ಮಯವಾಗಿದೆ.
ಇನ್ನ ಶಾಸಕರ ಭವನಕ್ಕೆ ಆಗಮಿಸಿದ ಪ್ರಧಾನಿ ರವರು, ಮುಖ್ಯಮಂತ್ರಿಗಳು ಹಾಗೂ ಕುರುಬ ಮಠದ ನಿರಂಜಾನಂದ ಸ್ವಾಮಿಜಿ ರವರೊಂದಿಗೆ ದಾಸ ಶ್ರೇಷ್ಟ ಕನಕದಾಸರ ಜಯಂತಿ ಹಿನ್ನೆಲೆ, ಕನಕದಾಸ ಹಾಗೂ ವಾಲ್ಮೀಕಿ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ನಮಿಸಿದರು.
ಇಂದು ಬೆಂಗಳೂರಿನಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕ್ಕೊಂಡಿರುವ ಪ್ರಧಾನಿ ರವರಿಗೆ ಭಿಜೆಪಿ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಸಾಥ್ನೀಡಲಿದ್ದಾರೆ.