Thursday, April 25, 2024

ಚಾಲಕನ ನಿರ್ಲಕ್ಷ ಹಿಂಭಾಗದಿಂದ ಶಾಲಾ ವಾಹನ ಟ್ಯಾಂಕರ್ ಗೆ ಡಿಕ್ಕಿ

ಕಾರವಾರ:ಚಾಲಕನ ನಿರ್ಲಕ್ಷ ಹಿಂಭಾಗದಿಂದ ಶಾಲಾ ವಾಹನ ಟ್ಯಾಂಕರ್ ಗೆ ಡಿಕ್ಕಿ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ ಸುಮಾರು 15 ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ.

ರಾಷ್ಟ್ರೀಯ ಹೆದ್ದಾರಿ 63ರ ಯಲ್ಲಾಪುರದ ಅರಬೈಲ್‌ ಘಟ್ಟದಲ್ಲಿ ಘಟನೆ ನಡೆದಿದ್ದು, ಹುಬ್ಬಳಿಯಿಂದ ಅಂಕೋಲಾ‌ ಮಾರ್ಗವಾಗಿ ಸುಂಕಸಾಳದತ್ತ ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್. ಹುಬ್ಬಳ್ಳಿಯ ಸೈಂಟ್ ಅಂಥೋನಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಹೊಂದಿದ್ದ ಬಸ್.

ಅಪಘಾತದಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದೆ.ಗಾಯಾಳುಗಳನ್ನು ಯಲ್ಲಾಪುರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES