ಬೆಂಗಳೂರು: ನಿರ್ಮಲಾನಂದ ಶ್ರೀಗಳ ಹೆಗಲ ಮೇಲೆ ಕಂದಾಯ ಸಚಿವ ಆರ್. ಅಶೋಕ್ ಅವರು ಕೈ ಹಾಕಿ ಅವಾಂತರವನ್ನ ತಮ್ಮ ಮೇಲೆ ಎಳೆದುಕೊಂಡಿದ್ದಾರೆ.
ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಕಂಚು ಪ್ರತಿಮೆಯನ್ನ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಸಿದರು. ಬಳಿಕ ನಡೆದ ಫೋಟೋ ಶೂಟ್ನಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಶ್ರೀಗಳ ಮೇಲೆ ಆರ್ ಅಶೋಕ್ ಅವರು ಕೈ ಹಾಕಿ ಎಡವಟ್ಟು ಮಾಡಿಕೊಂಡಿದ್ದಾರೆ.
ಈ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿ, ಸ್ವಾಮಿಜಿಗಳಿಗೆ ಅವರದ್ದೇ ಆದ ಗೌರವ ಘನತೆ ಇರುತ್ತದೆ. ಆದರೆ ಆರ್ ಅಶೋಕ್ ಅವರು ಶ್ರೀಗಳ ಹೆಗಲ ಮೇಲೆ ಕೈ ಹಾಕುವಷ್ಟು ದೊಡ್ಡವರಾಗಿದ್ದಾರಾ? ಶ್ರೀಗಳ ಮೇಲೆ ಕೈ ಹಾಕಿದ ಹಾಗೇ ಪ್ರಧಾನಿ ಮೋದಿ ಹೆಗಲ ಮೇಲೆ ಕೈ ಹಾಕುವಷ್ಟು ಧೈರ್ಯವಿದೆಯೇ? ಧರ್ಮ ,ಸಂಸ್ಕೃತಿ ಬಗ್ಗೆ ಬಿಜೆಪಿ ನಾಯಕರು ಮಾತಾಡ್ತಾರೆ. ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲ ಎಂದು ಕಿಡಿಕಾರಿದೆ.