Monday, February 24, 2025

ದಸರಾ ಆನೆ ಗೋಪಾಲಸ್ವಾಮಿ ನಿಧನ

ಮೈಸೂರು: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಮೃತಪಟ್ಟಿದೆ. ಚಿಕಿತ್ಸೆ ಫಲಕಾರಿಯಾಗದೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿ ನಿನ್ನೆ ಕೊನೆಯುಸಿರೆಳೆದಿದೆ.

ಕಾಡಾನೆ ಸೆರೆ, ಪಳಗಿಸುವ ತರಬೇತಿ ಪಡೆದಿದ್ದ 39 ವರ್ಷದ ಗೋಪಾಲಸ್ವಾಮಿ, ಇತ್ತೀಚೆಗೆ ಸೆರೆ ಹಿಡಿದಿದ್ದ ಆನೆ ಅಯ್ಯಪ್ಪ ಜತೆ ಕಾದಾಟದಲ್ಲಿ ಗಾಯಗೊಂಡಿತ್ತು. ಶಾಂತಸ್ವಾಭಾವದ ಆನೆಯಾಗಿದ್ದ ಗೋಪಾಲಸ್ವಾಮಿ, ಈ ವರೆಗೆ ಒಟ್ಟು 14 ಮೈಸೂರು ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು. ಈ ಬಾರಿಯ ದಸರಾದಲ್ಲಿ ಮರದ ಅಂಬಾರಿ ಹೊತ್ತು ಗಮನ ಸೆಳೆದಿತ್ತು.

RELATED ARTICLES

Related Articles

TRENDING ARTICLES