Friday, May 17, 2024

ಕಾಡಾನೆ ದಾಳಿಗೆ ಬೆಳೆ ನಾಶ

ಮೈಸೂರು : ಕಾಡಾನೆ ದಾಳಿಗೆ ಮಲೆನಾಡಿದ ರೈತ ರೋಸಿ ಹೋಗಿದ್ದಾನೆ. ದಿನಂಪ್ರತಿ ಕಾಡಾನೆ ದಾಳಿ ನಡೆಸಿ, ಬೆಳೆ ನಾಶಗೊಳಿಸ್ತಿದೆ.

ಮೈಸೂರಿನ ಹುಣಸೂರು ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಕಾಡಾನೆ ಬೆಳೆ ನಾಶ ಮಾಡಿದೆ. ಒಟ್ಟು 6 ಆನೆಗಳು ಕೃಷಿ ಭೂಮಿಗೆ ಲಗ್ಗೆ ಇಟ್ಟಿದ್ದು, ಬಾಳೆ, ತೆಂಗು, ಕಬ್ಬು ಮತ್ತು ಅಡಿಕೆ ಬೆಳೆಯನ್ನು ನಾಶಗೊಳಿಸಿದೆ.

ಪದೇ ಪದೇ ಕಾಡಿನಿಂದ ನಾಡಿಗೆ ಆನೆಗಳು ಬರುತ್ತಿದ್ದು, ಜನ ಕಂಗಾಲಾಗಿದ್ದಾರೆ. ನಟೇಶ್, ಶಮಿಯುಲ್ಲಾ, ಪ್ರದೀಪ್​​ ಎಂಬುವವರಿಗೆ ಸೇರಿದ್ದ ಜಮೀನಿನಲ್ಲಿ ಆನೆಗಳು ಪುಂಡಾಟ ಮೆರೆದಿವೆ. ಅಪಾರ ಮೌಲ್ಯದ ಬೆಳೆ ನಾಶವಾಗಿದ್ದು, ರೈತರು ತಲೆ ಮೇಲೆ ಕೈಹೊತ್ತು ಕೂರುವಂತಾಗಿದೆ. ಆನೆ ದಾಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಅರಣ್ಯ ಇಲಾಖೆ ಸಿಬ್ಬಂದಿಗೆ ಒತ್ತಾಯ ಮಾಡ್ತಿದ್ದಾರೆ.

RELATED ARTICLES

Related Articles

TRENDING ARTICLES