Saturday, December 9, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeಜಿಲ್ಲಾ ಸುದ್ದಿಮುತಾಲಿಕ್​ಗೆ ಅಪರಿಚಿತನಿಂದ ಕೊಲೆ ಬೆದರಿಕೆ

ಮುತಾಲಿಕ್​ಗೆ ಅಪರಿಚಿತನಿಂದ ಕೊಲೆ ಬೆದರಿಕೆ

ಧಾರವಾಡ : ರಾಜ್ಯದಲ್ಲಿ ಪ್ರತ್ಯೇಕ ಮಹಿಳಾ ಮುಸ್ಲಿಂ ಕಾಲೇಜು ತೆರೆಯುವುದಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಮುತಾಲಿಕ್​ಗೆ ಬೆದರಿಕೆ ಕರೆ ಬಂದಿದೆ.

ವಾಟ್ಸಾಪ್​ನಲ್ಲಿ 5 ವಾಯ್ಸ್ ಸಂದೇಶಗಳ ಮೂಲಕ ಅಪರಿಚಿತನೊಬ್ಬ ಕೊಲೆ ಬೆದರಿಕೆ ಹಾಕಿದ್ದಾನೆ. ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾನೆ. ನಿನ್ನ ಪಾಡಿಗೆ ನೀನಿರು, ನಮ್ಮ ತಂಟೆಗೆ ಬರಬೇಡ. ಈ ಹಿಂದೆ ಮಸಿ ಬಳಸಿಕೊಂಡಿರುವೆ. ಇನ್ನು ಮುಂದಾದ್ರು ನಮ್ಮ ಸಮುದಾಯದ ಬಗ್ಗೆ ಮಾತನಾಡಬೇಡ. ನಮ್ಮ ಸಮುದಾಯದ ವಿರುದ್ಧ ಮಾತನಾಡೋಕೆ ನೀನ್ಯಾರು. ಇನ್ನು ಮುಂದೆ ಈಗೆ ಮಾತನಾಡಿದರೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಕೊಲೆ ಬೆದರಿಕೆ ಹಾಕಿದ್ದಾನೆ.

Most Popular

Recent Comments