Friday, March 29, 2024

ಆ.. ವಿಡಿಯೋ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಬಿಜೆಪಿಯವರು 500 ರೂ. ಹಣ ಕೊಟ್ಟು ಸಮಾರಂಭಕ್ಕೆ ಜನರನ್ನು ಕರೆದುಕೊಂಡು ಬರುತ್ತಾರೆ ಎಂದು ನಾನು ಹೇಳಿದ್ದನ್ನು ಬಿಜೆಪಿಯವರು ತಿರುಚಿ ನನ್ನ ತಲೆಗೆ ಕಟ್ಟುವ ಪ್ರಯತ್ನ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ವೈರಲ್ ಆದ ವಿಡಿಯೋಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಈ ರಿತಿಯ ನಕಲಿ ವಿಡಿಯೋ ಹಾಗೂ ಆಡಿಯೋ ಮೂಲಕ ಅಪಪ್ರಚಾರ ಮಾಡಿ ನನ್ನ ತೇಜೋವಧೆ ಮಾಡಲು ಮುಂದಾಗಿದ್ದಾರೆ. ಈ ರೀತಿ ಭಾವಿಸಿದ್ದರೆ ಅದು ಬಿಜೆಪಿಯವರ ಭ್ರಮೆ ಎಂದು ಟಾಂಗ್ ಕೊಟ್ಟಿದ್ದಾರೆ.

ರಾಜ್ಯದ ಜನತೆ 40 ವರ್ಷಗಳ ನನ್ನ ರಾಜಕಾರಣವನ್ನು ನೋಡಿದ್ದಾರೆ. ಇಂತಹ ನಕಲಿ ವಿಡಿಯೋ ಹಾಗೂ ಆಡಿಯೋಗಳಗೆ ಬಲಿಯಾಗದೆ ಜನರು ಜಾಗೃತರಾಗಿ ಇರಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ : ಸಿಎಂ ಬೊಮ್ಮಾಯಿ ರಾಜೀನಾಮೆಗೆ ಡಿಕೆಶಿ ಆಗ್ರಹ

ಸಿದ್ದರಾಮಯ್ಯ ಕಾಲದಲ್ಲಿ ಭ್ರಷ್ಟಾಚಾರ

ಸಿದ್ದರಾಮಯ್ಯ ಕಾಲದಲ್ಲಿ ಭ್ರಷ್ಟಾಚಾರ ಆಗಿತ್ತು ಎಂದು ಬಿಜೆಪಿಯವರು ಆರೋಪ ಮಾಡುತ್ತಾರೆ. ತಮ್ಮ ಮೇಲಿನ ಭ್ರಷ್ಟಾಚಾರ ಆರೋಪವನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಾರೆ. ಈಗ ಸಾಕ್ಷ್ಯ ಸಮೇತ ಬೆಳಕಿಗೆ ಬಂದಿರುವ ಲಂಚ ಪ್ರಕರಣದ ಬಗ್ಗೆ ಬಿಜೆಪಿ ಯಾಕೆ ತನಿಖೆ ನಡೆಸಲಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES