Friday, March 29, 2024

ಕರುನಾಡಲ್ಲಿ ಪ್ರಧಾನಿ ಮೋದಿ ‘ಕಬ್ಜ’ : ಏಳನೇ ಬಾರಿ ರಾಜ್ಯಕ್ಕೆ ಮೋದಿ

ಬೆಂಗಳೂರು : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ನಾಯಕರು ಕರ್ನಾಟಕಕ್ಕೆ ಭೇಟಿ ನೀಡುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಏಳನೇ ಬಾರಿ ರಾಜ್ಯಕ್ಕೆ ಆಗಮಿಸಿದ್ದಾರೆ.

ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ, ನಂತರ ಸೇನಾ ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಗೆ ಬಂದಿಳಿದಿದ್ದಾರೆ. ಪ್ರಧಾನಿ ಮೋದಿಗೆ ಸಿಎಂ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹಾಗೂ ಇತರ ಗಣ್ಯರು ಸಾಥ್ ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಹಲವು ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಬಳಿಕ, ವೈಟ್​​ಫೀಲ್ಡ್- ಕೆ.ಆರ್.ಪುರ ಮಾರ್ಗದ ನೂತನ ಮೆಟ್ರೋ ಮಾರ್ಗ ಲೋಕಾರ್ಪಣೆ ಮಾಡಲಿದ್ದಾರೆ.

ವೈಟ್‌ಫೀಲ್ಡ್‌ ಟು ಕೆ.ಆರ್. ಪುರ ವಿಶೇಷತೆಗಳು

  • ವೈಟ್‌ಫೀಲ್ಡ್‌ನಿಂದ ಕೆ.ಆರ್. ಪುರದವರೆಗೂ 13.71 ಕಿ.ಮೀ. ಉದ್ದದ ಮಾರ್ಗ
  • ಇಂದು ಪ್ರಧಾನಿ ಮೋದಿ ಕೆ.ಆರ್‌.ಪುರ ಮೆಟ್ರೋ ಸೇವೆಗೆ ಚಾಲನೆ‌
  • ಕಾರು ಮತ್ತು ದ್ವಿಚಕ್ರ ವಾಹನಗಳಿಗೆ ಹೆಚ್ಚುವರಿ ಪಾರ್ಕಿಂಗ್ ಸೌಲಭ್ಯ
  • 2 ಬದಿಯಲ್ಲೂ ಪ್ರವೇಶ/ನಿರ್ಗಮನ ದ್ವಾರದೊಂದಿಗೆ BMTC ಬಸ್ ನಿಲ್ದಾಣಗಳು
  • ಮೆಟ್ರೋದಿಂದ ನೇರವಾಗಿ ರೈಲ್ವೆ ನಿಲ್ದಾಣಗಳಿಗೆ ಸಂಪರ್ಕಿಸಲು ಮೇಲ್ಸೇತುವೆಗಳು
  • ಕೆ.ಆರ್.ಪುರ ಮತ್ತು ವೈಟ್‌ಫೀಲ್ಡ್‌ನಲ್ಲಿ ರೈಲ್ವೆ ನಿಲ್ದಾಣಗಳಿಗೆ ಮೇಲ್ಸೇತುವೆಗಳು
  • ಪಟ್ಟಂದೂರು ಅಗ್ರಹಾರ ನಿಲ್ದಾಣದಲ್ಲಿ ಐಟಿಬಿಟಿಗೆ ನೇರವಾಗಿ ಮೇಲ್ಸೇತುವೆ ಸಂಪರ್ಕ
  • ವಿಕಲಚೇತನರು ಎಲ್ಲಾ ನಿಲ್ದಾಣಗಳನ್ನು ಉಪಯೋಗಿಸುವ ಸೌಲಭ್ಯ
  • ಪ್ರಯಾಣಿಕರ ಅನುಕೂಲಕ್ಕಾಗಿ, ಪ್ರತಿ ನಿಲ್ದಾಣದಲ್ಲಿ 8 ಎಸ್ಕಲೇಟರ್‌ಗಳು, 4 ಎಲಿವೇಟರ್‌ಗಳು ಮತ್ತು 8 ಮೆಟ್ಟಿಲುಗಳ ಅಳವಡಿಕೆ

RELATED ARTICLES

Related Articles

TRENDING ARTICLES