Friday, May 17, 2024

ಮಗನಿಗೆ ಟಿಕೆಟ್​ ಕೊಡಿಸಲು ವಿ ಸೋಮಣ್ಣ ಸರ್ಕಸ್​ 

ನವದೆಹಲಿ :ವಿಧಾನಸಭೆ ಚುನಾವಣೆ ಇನ್ನೇನು ಸನಿಹದಲ್ಲೇ ಇದೆ. ಆದರೆ, ಇನ್ನೂ  ಕೂಡ ಕೇಸರಿ ಪಡೆ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿಲ್ಲ ಅಂದ್ರೆ  ಚುನಾವಣೆಯ ಟಿಕೆಟ್ ಕಾವು ಮಾತ್ರ ಹಾಗೇ ಇದೆ. ಈ ಬಾರಿ  ರಾಜ್ಯ ವಿಧಾನ ಸಭೆ ಚುನಾವಣೆ ಗೆಲ್ಲಲು ಅಭ್ಯರ್ಥಿಗಳು ಪಟತೊಟ್ಟಿದ್ದಾರೆ. ಇನ್ನೂ ಟಿಕೇಟ್​ಗಾಗಿ ಕೆಲವು ಮುಖಂಡರು ಬಂಡಾಯ ಎದ್ದಿದ್ದಾರೆ. ಇಂತಹ ಸಂದರ್ಭದಲ್ಲಿ ವಿ ಸೋಮಣ್ಣ (V Somanna) ತನ್ನ ಮಗನಿಗಾಗಿ ಟಿಕೆಟ್ ನೀಡಲು ವರಿಷ್ಠರಿಗೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯ ವಿರುದ್ಧ ನಾನು ಸ್ಪರ್ಧೆ ಮಾಡಲ್ಲ : ವಿ.ಸೋಮಣ್ಣ

ಹೌದು,  ಗುಬ್ಬಿ ಕ್ಷೇತ್ರದಿಂದ ಪುತ್ರನಿಗೆ ಟಿಕೆಟ್ ​ನೀಡಬೇಕೆಂದು ಸೋಮಣ್ಣ ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ ದೂರವಾಣಿ ಮೂಲಕ ಅಮಿತ್ ಶಾ ಜೊತೆಗೂ ಮಾತುಕತೆ ನಡೆಸಿದ್ದು, ಯಾವುದೇ ನಾಯಕರ ಮಕ್ಕಳಿಗೆ ಟಿಕೆಟ್ ಕೊಟ್ಟಲ್ಲಿ ನನ್ನ ಮಗ ಅರುಣ್​ಗೂ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಅಪ್ಪ ಮಕ್ಕಳಿಗೆ ಟಿಕೆಟ್ ಕೊಡಲ್ಲ ಅಂದರೆ ನನಗೆ ಟಿಕೆಟ್ ಬೇಡ. ನನ್ನ ಮಗ ಅರುಣ್ ಗೆ ಕೊಡಿ ಎಂದು ಅಮಿತ್​ ಶಾಗೆ ಮನವಿ ಮಾಡಿದ್ದಾರೆ.

ಆದ್ರೆ, ಸೋಮಣ್ಣ ಮಾತಿಗೆ ಅಮಿತ್ ಶಾ ಆಕ್ಷೇಪ ವ್ಯಕ್ತಪಡಿಸಿದ್ದು, ನೀವು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು. ನಿಮ್ಮ ಮಗನ ಸ್ಪರ್ಧೆ ಬಗ್ಗೆ ನಾವು ನಿರ್ಧಾರ ಮಾಡುತ್ತೇವೆ. ದೊಡ್ಡ ಮಟ್ಟದಲ್ಲಿ ಪಕ್ಷಕ್ಕೆ ನಿಮ್ಮ ಅವಶ್ಯಕತೆ ಇದೆ ಎಂದಿದ್ದಾರೆ ಎನ್ನಲಾಗಿದೆ.

ಹೀಗೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

 

RELATED ARTICLES

Related Articles

TRENDING ARTICLES