Saturday, May 18, 2024

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ : ಸಾರ್ವಜನಿಕರೇ ಈ ರಸ್ತೆಗಳತ್ತ ಹೊಗಲೇ ಬೇಡಿ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಗಣಿನಾಡು ಬಳ್ಳಾರಿ ಮತ್ತು ಕಲ್ಪತರು ನಾಡು ತುಮಕೂರಿಗೆ ಆಗಮಿಸಲಿದ್ದಾರೆ.

ಎರಡು ಜಿಲ್ಲೆಗಳಲ್ಲಿ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಭಾಗವಹಿಸಿ ಬಳಿಕ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೀಗಾಗಿ, ಇಂದು ಸಂಜೆ 5.30ರಿಂದ ರಾತ್ರಿ 7 ಗಂಟೆ ವರೆಗೆ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ.

ಈ ಕುರಿತು ಬೆಂಗಳೂರು ನಗರ ಸಂಚಾರಿ ಪೊಲೀಸರು ವಾಹನ ಸವಾರರಿಗೆ ವಾಹನ ಸವಾರರಿಗೆ ಮಾಹಿತಿ ನೀಡಿದ್ದಾರೆ. ಬದಲಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಮೋದಿ ‘ಸೂಟು-ಬೂಟು, ಎಸಿ ಕೋಣೆ’ ವಾಸ್ತವ್ಯದ ಪ್ರಧಾನಿಯಲ್ಲ : ಸಿಎಂ ಬೊಮ್ಮಾಯಿ

ರಸ್ತೆಗಳು ಸಂಪೂರ್ಣ ಬಂದ್

ಹಳೆ ವಿಮಾನ ನಿಲ್ದಾಣ ರಸ್ತೆ, ಕೇಂಬ್ರಡ್ಜ್ ಲೇಔಟ್ ರಸ್ತೆ, ಇಂದಿರಾ ನಗರ 100 ಅಡಿ ರಸ್ತೆ, ಅರಳಿ ಕಟ್ಟೆ, ಎ.ಎಸ್.ಸಿ ಸೆಂಟರ್, ಟ್ರಿನಿಟಿ ವೃತ್ತ, ರಾಜಭವನ ರಸ್ತೆ​, ಎಂ.ಜಿ ರಸ್ತೆ, ಡಿಕನ್​ಸನ್​ ರಸ್ತೆ, ಮಣಿಪಾಲ್ ಸೆಂಟರ್, ಕಬ್ಬನ್ ರಸ್ತೆ, ಬಿಆರ್​ವಿ ಜಂಕ್ಷನ್, ಸಿಟಿಓ ಜಂಕ್ಷನ್, ಇನ್​ಫೆಂಟ್ರಿ ರಸ್ತೆ.

ಈ ಎಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು,ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES