ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಗಣಿನಾಡು ಬಳ್ಳಾರಿ ಮತ್ತು ಕಲ್ಪತರು ನಾಡು ತುಮಕೂರಿಗೆ ಆಗಮಿಸಲಿದ್ದಾರೆ.
ಎರಡು ಜಿಲ್ಲೆಗಳಲ್ಲಿ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಭಾಗವಹಿಸಿ ಬಳಿಕ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೀಗಾಗಿ, ಇಂದು ಸಂಜೆ 5.30ರಿಂದ ರಾತ್ರಿ 7 ಗಂಟೆ ವರೆಗೆ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ.
ಈ ಕುರಿತು ಬೆಂಗಳೂರು ನಗರ ಸಂಚಾರಿ ಪೊಲೀಸರು ವಾಹನ ಸವಾರರಿಗೆ ವಾಹನ ಸವಾರರಿಗೆ ಮಾಹಿತಿ ನೀಡಿದ್ದಾರೆ. ಬದಲಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಮೋದಿ ‘ಸೂಟು-ಬೂಟು, ಎಸಿ ಕೋಣೆ’ ವಾಸ್ತವ್ಯದ ಪ್ರಧಾನಿಯಲ್ಲ : ಸಿಎಂ ಬೊಮ್ಮಾಯಿ
'ಸಂಚಾರ ಸಲಹೆ'
'Traffic Advisory' pic.twitter.com/oqfk14DOGB— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) May 4, 2023
ಈ ರಸ್ತೆಗಳು ಸಂಪೂರ್ಣ ಬಂದ್
ಹಳೆ ವಿಮಾನ ನಿಲ್ದಾಣ ರಸ್ತೆ, ಕೇಂಬ್ರಡ್ಜ್ ಲೇಔಟ್ ರಸ್ತೆ, ಇಂದಿರಾ ನಗರ 100 ಅಡಿ ರಸ್ತೆ, ಅರಳಿ ಕಟ್ಟೆ, ಎ.ಎಸ್.ಸಿ ಸೆಂಟರ್, ಟ್ರಿನಿಟಿ ವೃತ್ತ, ರಾಜಭವನ ರಸ್ತೆ, ಎಂ.ಜಿ ರಸ್ತೆ, ಡಿಕನ್ಸನ್ ರಸ್ತೆ, ಮಣಿಪಾಲ್ ಸೆಂಟರ್, ಕಬ್ಬನ್ ರಸ್ತೆ, ಬಿಆರ್ವಿ ಜಂಕ್ಷನ್, ಸಿಟಿಓ ಜಂಕ್ಷನ್, ಇನ್ಫೆಂಟ್ರಿ ರಸ್ತೆ.
ಈ ಎಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು,ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.