Monday, May 20, 2024

ಟಾಸ್ ಗೆದ್ದ ಚೆನ್ನೈ ಮೊದಲು ಬೌಲಿಂಗ್ ಆಯ್ಕೆ, ತೆಂಡೂಲ್ಕರ್ ಅಲಭ್ಯ

ಬೆಂಗಳೂರು : ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಾಯಕ ಮಹೇಂದ್ರ ಸಿಂಗ್ ಧೋನಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಚೆನ್ನೈನ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ಐಪಿಎಲ್ 49ನೇ ಪಂದ್ಯ ನಡೆಯುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್​ ಆಡಿರುವ 10 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡ ಆಡಿರುವ 9 ಪಂದ್ಯಗಳಲ್ಲಿ 5 ಪಂದ್ಯಗಳನ್ನು ಗೆದ್ದು 10 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ.

ಇದನ್ನೂ ಓದಿ : ‘ಧೋನಿ ಆರ್ಭಟಿಸಲಿ, ಆದ್ರೆ, ಮುಂಬೈ ಗೆಲ್ಲಲಿ’ : ಮುಂಬೈ ಪ್ಯಾನ್ಸ್ ರಿಕ್ವೆಸ್ಟ್

ಚೆನ್ನೈ ಸೂಪರ್ ಕಿಂಗ್ಸ್

ಎಂ.ಎಸ್ ಧೋನಿ(ನಾಯಕ), ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ದೀಪಕ್ ಚಹಾರ್, ಪತಿರಾನ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ

ಮುಂಬೈ ಇಂಡಿಯನ್ಸ್

ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ಕ್ಯಾಮೆರಾನ್ ಗ್ರೀನ್, ನೇಹಲ್ ವಡೇರಾ, ಟ್ರಿಸ್ಟನ್ ಸ್ಟಬ್ಸ್, ಅರ್ಷದ್ ಖಾನ್, ಪಿಯೂಷ್ ಚಾವ್ಲಾ, ಜೋಫ್ರಾ ಆರ್ಚರ್, ಆಕಾಶ್ ಮದವಾಲ್

RELATED ARTICLES

Related Articles

TRENDING ARTICLES