Friday, March 29, 2024

ಶಿಕಾರಿಪುರದಲ್ಲಿ ಬಿ.ವೈ ವಿಜಯೆಂದ್ರಗೆ ಮುನ್ನಡೆ

ಶಿವಮೊಗ್ಗ : ರಾಜ್ಯ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೆಂದ್ರ ಮುನ್ನಡೆ ಸಾಧಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ಜೆಡಿಎಸ್ ಅಭ್ಯರ್ಥಿ ಗೆ ಮುನ್ನಡೆಯಾಗಿದೆ. ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯಾನಾಯ್ಕ್ ಅವರು ಮುನ್ನಡೆ ಸಾಧಿಸಿದ್ದಾರೆ.

ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ ರತ್ನಾಕರ್ ಗೆ ಮುನ್ನಡೆ.

ಶಿಕಾರಿಪುರ ಬಿ.ವೈ. ವಿಜಯೆಂದ್ರಗೆ ಮುನ್ನಡೆ.

ಸಾಗರದಲ್ಲಿ ಹರತಾಳು ಹಾಲಪ್ಪಗೆ ಮುನ್ನಡೆ.

ಸೊರಬದಲ್ಲಿ ಮಧು ಬಂಗಾರಪ್ಪ ಗೆ ಮುನ್ನಡೆ.

ಭದ್ರಾವತಿಯಲ್ಲಿ ಶಾರದಾ ಅಪ್ಪಾಜಿಗೌಡಗೆ ಮುನ್ನಡೆ.

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಆಯನೂರು ಮಂಜುನಾಥ್ ಗೆ ಮುನ್ನಡೆ.

ಮಹಾಲಕ್ಷ್ಮೀ ಲೇಔಟ್ ನಲ್ಲಿ ಬಿಗ್ ಫೈಟ್

ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಕೈ ಅಭ್ಯರ್ಥಿ ಕೇಶವ ಮೂರ್ತಿ ಮಧ್ಯೆ ತೀವ್ರ ಪೈಪೋಟಿ

ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯ

ಬಿಜೆಪಿಗೆ 3875 ಮತಗಳು

ಕಾಂಗ್ರೆಸ್ ಗೆ 3137 ಮತಗಳು

ಗೋಪಾಲಯ್ಯಗೆ 738 ಮತಗಳ ಮುನ್ನಡೆ

RELATED ARTICLES

Related Articles

TRENDING ARTICLES