Thursday, April 18, 2024

ಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲೇ ಮುಖಭಂಗ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಮ್ಮ ತವರು ಜಿಲ್ಲೆಯಲ್ಲೇ ಭಾರೀ ಮುಖಭಂಗವಾಗಿದೆ.

ಹಾವೇರಿಯಲ್ಲಿ ಸುಮಾರು 6 ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಕೇವಲ ಮುಖ್ಯಮಂತ್ರಿ ಬೊಮ್ಮಾಯಿ ಕ್ಷೇತ್ರವಾದ ಶಿಗ್ಗಾಂವಿಯಲ್ಲಿ ಮಾತ್ರ ಬಿಜೆಪಿ ಮುನ್ನಡೆ ಸಾಧಿಸಿದೆ.

ಈ ಬೆಳವಣಿಗೆ ಸಿಎಂ ಹಾಗೂ ಬಿಜೆಪಿ ಆತಂಕಕ್ಕೆ ಕಾರಣವಾಗಿದೆ. ಬ್ಯಾಡಗಿ, ಹಾವೇರಿ, ಹಿರೇಕೆರೂರ, ರಾಣೆಬೆನ್ನೂರು, ಹಾನಗಲ್‌ನಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಹಿರೇಕೆರೂರು ಕ್ಷೇತ್ರದಲ್ಲಿ ಬಿಜೆಪಿ ಸಚಿವ ಬಿ.ಸಿ ಪಾಟೀಲ್ ಅವರಿಗೆ ಹಿನ್ನಡೆಯಾಗಿದೆ.

ಚಿಕ್ಕಬಳ್ಳಾಪುರದಲ್ಲಿ 4ನೇ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ

ಬಿಜೆಪಿಯ ಸುಧಾಕರ್​​ ವಿರುದ್ಧ ಪ್ರದೀಪ್ ಈಶ್ವರ್​ಗೆ 2181 ಮತಗಳ ಮುನ್ನಡೆ

ಮುಧೋಳದಲ್ಲಿ ಬಿಜೆಪಿ ಗೋವಿಂದ ಕಾರಜೋಳಗೆ 5,000 ಮತಗಳ ಹಿನ್ನಡೆ

ಚಾಮರಾಜನಗರದಲ್ಲಿ 6ನೇ ಸುತ್ತಿನಲ್ಲೂ ಕಾಂಗ್ರೆಸ್​ನ ಪುಟ್ಟರಂಗ ಶೆಟ್ಟಿ ಮುನ್ನಡೆ

ಚನ್ನಗಿರಿಯಲ್ಲಿ ಕಾಂಗ್ರೆಸ್​ನ ಶಿವಗಂಗಾ ಬಸವರಾಜ್​ಗೆ ಮುನ್ನಡೆ

ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿಗೆ ಹಿನ್ನಡೆ

ಬಳ್ಳಾರಿ ಗ್ರಾಮೀಣದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಹಿನ್ನಡೆ

ಕಂಪ್ಲಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಜೆ.ಎನ್​.ಗಣೇಶ್ ಮುನ್ನಡೆ

ಸೊರಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಮುನ್ನಡೆ

ಬಳ್ಳಾರಿ, ಚಿತ್ರದುರ್ಗದಲ್ಲಿ ಕಾಂಗ್ರೆಸ್​​ ಕಮಾಲ್

ಬಳ್ಳಾರಿಯ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳ ಮುನ್ನಡೆ

ಚಿತ್ರದುರ್ಗದ 6 ಕ್ಷೇತ್ರಗಳಲ್ಲೂ ಕಾಂಗ್ರೆಸ್​ ಭರ್ಜರಿ ಮುನ್ನಡೆ

ಕಾಂಗ್ರೆಸ್​ 95, ಬಿಜೆಪಿ 61ರಲ್ಲಿ ಮುನ್ನಡೆ

224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ-61, ಕಾಂಗ್ರೆಸ್​-95, ಜೆಡಿಎಸ್​​-19, ಕೆಆರ್​​ಪಿಪಿ 1, ಎನ್​ಸಿಪಿ-1, ಎಸ್​ಕೆಪಿ-1 ಮತ್ತು ಇತರೆ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಒಟ್ಟು 180 ಕ್ಷೇತ್ರಗಳಲ್ಲಿಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

RELATED ARTICLES

Related Articles

TRENDING ARTICLES