Wednesday, May 1, 2024

ನೆಹರೂ ಜೊತೆ ಮೋದಿಯನ್ನು ಹೋಲಿಸಲು ಸಾಧ್ಯವೇ? : ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ನೆಹರೂ ಅವರಿಗೂ ಹೋಲಿಕೆ ಮಾಡಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ್ದಾರೆ.

ರಾಜೀವ್ ಗಾಂಧಿಯವರು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ತಮ್ಮದೇ ಕೊಡುಗೆ ನೀಡಿದ್ದಾರೆ. ನೆಹರೂ ಅವರು ಪ್ರಜಾಪ್ರಭುತ್ವದ ಬುನಾದಿ ಹಾಕಿದವರು. ಭಾರತದಂತಹ ದೊಡ್ಡ ದೇಶದಲ್ಲಿ ಪ್ರಜಾಪ್ರಭುತ್ವ ಯಶಸ್ವಿಯಾಗಲು ಜವಾಹರ್ ಲಾಲ್ ನೆಹರು ಅವರು ಹಾಕಿದ ಬುನಾದಿಯೇ ಕಾರಣ ಎಂದು ಹೇಳಿದ್ದಾರೆ.

ರಾಹುಲ್ ಅದನ್ನು ಮುಂದುವರಿಸುತ್ತಿದ್ದಾರೆ

ವಿರೋಧ ಪಕ್ಷಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ಬೆಂಬಲ ಸಹಕಾರ ನೀಡಿದರು. ಈಗಿನ ಪ್ರಧಾನಿಗಳಿಗೂ ನೆಹರೂ ಅವರಿಗೂ ಹೋಲಿಕೆ ಮಾಡಲು ಸಾಧ್ಯವೇ ಇಲ್ಲ. ರಾಜೀವ್ ಗಾಂಧಿಯವರು ಪ್ರಜಾಪ್ರಭುತ್ವದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಬಯಸಿದ್ದರು. ರಾಹುಲ್ ಗಾಂಧಿಯವರು ಅದನ್ನು ಮುಂದುವರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕರುನಾಡಲ್ಲಿ ‘ಶಾಂತಿ, ಸಾಮರಸ್ಯ, ಪ್ರಗತಿ’ ಸಾಧಿಸಲು ಕಾಂಗ್ರೆಸ್ ಬದ್ಧ : ಸೋನಿಯಾ ಗಾಂಧಿ

ಅವ್ರು ಯಾರೂ ಪ್ರಾಣ ಕಳೆದುಕೊಂಡಿಲ್ಲ

ಕಾಂಗ್ರೆಸ್ ನವರು ಭಯೋತ್ಪಾದನೆಯನ್ನು ಬೆಂಬಲಿಸುತ್ತಾರೆ ಎಂದು ಮಾತನಾಡುವ ಬಿಜೆಪಿಯವರು ಯಾರೂ ಭಯೋತ್ಪಾದನೆಯಲ್ಲಿ ಪ್ರಾಣ ಕಳೆದುಕೊಂಡಿಲ್ಲ. ಕಾಂಗ್ರೆಸ್ಸಿನವರು ದೇಶದಲ್ಲಿ ಭಯೋತ್ಪಾದನೆ ತೊಲಗಿಸಲು ಹೋರಾಡಿದರು. ಭಯೋತ್ಪಾದನೆಯಿಂದ ದೇಶಕ್ಕೆ ಅಪಾಯ. ಜನರ ನೆಮ್ಮದಿ, ಶಾಂತಿಯನ್ನು ಹಾಳು ಮಾಡುವ ಭಯೋತ್ದಾದನೆಯನ್ನು ತೊಡೆದು ಹಾಕಲು ಕಾಂಗ್ರೆಸ್ ಮೊದಲಿನಿಂದಲೂ ಹೋರಾಟ ಮಾಡುತ್ತಿದೆ. ಭಯೋತ್ದಾದನೆಗೆ  ರಾಜೀವ್ ಗಾಂಧಿ ಹಾಗೂ ಇಂದಿರಾ ಗಾಂಧಿ ಬಲಿಯಾಗಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಸರ್ವ ಜನಾಂಗದ ಶಾಂತಿಯ ತೋಟವನ್ನು ನಿರ್ಮಿಸಬೇಕಿದೆ. ಇದನ್ನು ಸ್ಥಾಪಿಸಲು ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಮತ್ತಿತರರು ಪ್ರಯತ್ನಿಸಿದರು. ರಾಜೀವ್ ಗಾಂಧಿಯಂತಹ ಮಹಾನ್ ನಾಯಕನೊಬ್ಬನನ್ನು ಭಯೋತ್ಪಾದನೆ ಬಲಿತೆಗೆದುಕೊಂಡಿದೆ. ರಾಜೀವ್ ಗಾಂಧಿಯವರು ಒಬ್ಬ ಕ್ರಿಯಾಶೀಲ ನಾಯಕರು. ಅವರು ಹಾಕಿಕೊಟ್ಟ ದಾರಿಯಲ್ಲಿ ಎಲ್ಲರೂ ನಡೆಯುವ ಪ್ರಯತ್ನ ಮಾಡೋಣ ಎಂದು ಕರೆ ಕೊಟ್ಟಿದ್ದಾರೆ.

RELATED ARTICLES

Related Articles

TRENDING ARTICLES