Friday, May 10, 2024

ಕಾಂಗ್ರೆಸ್‌ ಗ್ಯಾರಂಟಿ ಜಾರಿಗೆ ಕೆಲವೇ ದಿನಗಳಲ್ಲಿ ಅಂತಿಮ ಮುದ್ರೆ..?

ಬೆಂಗಳೂರು: ಐದು ಗ್ಯಾರಂಟಿ ಯೋಜನೆ ಜಾರಿ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಮೀಟಿಂಗ್‌ ನಡೆಯಲಿದೆ.

ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಯೋಜನೆಗಳ ಜಾರಿಗೆ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸಲಾಗ್ತಿದೆ. ಇಂಧನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಹಾರ, ಸಾರಿಗೆ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ 5 ಇಲಾಖೆಗಳ ಸಚಿವರು, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಯೋಜನೆಗಳ ಜಾರಿ ಸಂಬಂಧ ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆಯಲಿದ್ದಾರೆ. ಈಗಾಗಲೇ 2ನೇ ಸಂಪುಟ ಸಭೆಯಲ್ಲಿ ಗ್ಯಾರಂಟಿ ಜಾರಿ ಮಾಡುವುದಾಗಿ ಹೇಳಿದ್ದಾರೆ.

 

 

 

 

RELATED ARTICLES

Related Articles

TRENDING ARTICLES