Friday, March 29, 2024

ಅಜ್ಜಿಯನ್ನೇ ಕೊಂದ ಮೊಮ್ಮಗ!: ಕಾರಿನಲ್ಲೇ ಹೆಣ ಇಟ್ಕೊಂಡು ಮಿಸ್ಸಿಂಗ್ ಕಂಪ್ಲೆಂಟ್ ಕೊಟ್ಟ ಭೂಪ

ಮೈಸೂರು : ಕೆಲಸ ಇಲ್ಲದವನು ಅಂತಾ ಅಜ್ಜಿ ಯಾವಾಗಲೂ ಬೈಯುತ್ತಿದ್ದಳು ಎಂದು ಕೋಪದ ಕೈಗೆ ಬುದ್ದಿ ಕೊಟ್ಟ ಮೊಮ್ಮಗ ಅಜ್ಜಿಯನ್ನೇ ಹತ್ಯೆ ಮಾಡಿದ್ದಾನೆ.

ಅರಮನೆ ನಗರಿ ಮೈಸೂರಿನಲ್ಲಿ ಈ ಘಟನೆ ನಡೆದಿದೆ. ಕೊರಿಯನ್ ವೆಬ್ ಸೀರಿಸ್ ನೋಡಿ ಮೊಮ್ಮಗ ತನ್ನ ಅಜ್ಜಿಯ ಮೃತದೇಹ ಸುಟ್ಟು ಬಚಾವಾಗಲು ಯತ್ನಿಸಿ, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಮೈಸೂರಿನ ಗಾಯತ್ರಿಪುರಂ ನಿವಾಸಿ ಸುಲೋಚನ (75) ಮೃತ ಅಜ್ಜಿ. ಸುಪ್ರೀತ್ (23) ಅಜ್ಜಿ ಕೊಂದ ಮೊಮ್ಮಗ. ಹೆಣವನ್ನು ಪ್ಯಾಕ್ ಮಾಡಿ ಕಾರಿನಲ್ಲಿಟ್ಟುಕೊಂಡು ದಿನವಿಡೀ ಓಡಾಡಿದ್ದಾನೆ. ಅಜ್ಜಿ ಹೆಣ ಕಾರಿನಲ್ಲೇ ಇಟ್ಟುಕೊಂಡು ಮಿಸ್ಸಿಂಗ್ ಕಂಪ್ಲೆಂಟ್ ನೀಡಿದ್ದ. ನಂತರ ಮಾತಿನ ವರಸೆ ಬದಲಿಸಿ ಕಡೆಗೆ ಪೊಲೀಸರ ಮುಂದೆ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ಓದಿ : ಮೊಮ್ಮಗನಿಗೆ ಕವಳಿ ಹಣ್ಣು ಕಿತ್ತು ಕೊಟ್ಟು ಮನೆಗೆ ಕಳಿಸಿದ್ದ ತಾತ, ಶವವಾಗಿ ಪತ್ತೆ

ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ

ಕೆಆರ್‌ಎಸ್ ಹಿನ್ನೀರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಸಿಕ್ಕ ಪ್ರಕರಣ ಭೇದಿಸಿದ ಮೈಸೂರು ಪೊಲೀಸರಿಗೆ, ಸ್ವಂತ ಅಜ್ಜಿಯನ್ನು ಮೊಮ್ಮಗನೇ ಹತ್ಯೆ ಮಾಡಿರುವ ಬೆಚ್ಚಿಬೀಳಿಸುವ ಸಂಗತಿ ಬೆಳಕಿಗೆ ಬಂದಿದೆ. ಗುರುತು ಸಿಗದಂತೆ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಮೇ 28 ರಂದು ಮನೆಯಲ್ಲಿ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಯುವಕ.

ಬೈತಿದ್ರು ಅಂತಾ ಕೊಂದೇ ಬಿಟ್ಟ

ಇನ್ನೂ, ಅಜ್ಜಿ ಸುಲೋಚನ ಯಾವಾಗಲೂ ನನಗೆ ಬೈಯುತ್ತಿದ್ದಳೂ. ಹಾಗಾಗಿ ಕೊಲೆ ಮಾಡಿದೆ ಎಂದು ಆರೋಪಿ ಹೇಳಿದ್ದಾನೆ. ಅಜ್ಜಿ ಸುಲೋಚನ ಅವರನ್ನು ಹತ್ಯೆ ಮಾಡಿದ ಬಳಿಕ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ, ರಟ್ಟಿನ ಬಾಕ್ಸ್ ನಲ್ಲಿ ಹಾಕಿದ್ದನು. ಬಳಿಕ ಶವವನ್ನು ಸುಟ್ಟು ಹಾಕಿದ್ದನು. ಮೃತದೇಹದ ತಲೆ ಕೂದಲು ಹಾಗೂ ಕನ್ನಡಕದಿಂದ ಮೈಸೂರು ದಕ್ಷಿಣ ಠಾಣೆ ಪೊಲೀಸರು ತನಿಖೆ ನಡೆಸಿದ್ದರು.

RELATED ARTICLES

Related Articles

TRENDING ARTICLES