Monday, May 13, 2024

ಬಿಜೆಪಿ ನಾಯಕರು ಕೇಂದ್ರದ ಮೇಲೆ ಒತ್ತಡ ಹಾಕಲಿ ; ಸಿದ್ದರಾಮಯ್ಯ

ಬೆಂಗಳೂರು : ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರಕ್ಕೆ ಹೆಚ್ಚುವರಿ ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೌದು, ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮೊದಲು ಭಾರತೀಯ ಆಹಾರ ನಿಗಮ ಅಕ್ಕಿ ನೀಡುವುದಾಗಿ ಹೇಳಿತ್ತು. ಜೂನ್​ 12ರಂದು ಎಫ್​​ಸಿಐ ಕೂಡ ಪತ್ರ ಬರೆದು ಅಕ್ಕಿ ನೀಡಲಾಗಲ್ಲ ಎಂದು ತಿಳಿಸಿದೆ. ಬಡವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು ಯಾಕೆ? ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಎಂದು ಕಿಡಿಕಾರಿದ್ದರು.

ಇದನ್ನೂ ಓದಿ: ಒಂದು ಗ್ರಾಂ ಅಕ್ಕಿ ಕಡಿಮೆ ಕೊಟ್ಟರೂ ಜನ ಸುಮ್ಮನಿರುವುದಿಲ್ಲ; ಬಿ.ಎಸ್.ವೈ

ರಾಜ್ಯ ಬಿಜೆಪಿ ನಾಯಕರಿಗೆ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ಅಕ್ಕಿ ಕೊಡಿಸಲಿ ಎಂದರು. ಇನ್ನೂ ಈ ಹೇಳಿಕೆಗೆ ಪ್ರತಿಕ್ರಿಯೆಸಿದ ಆರ್​. ಅಶೋಕ್​  ಗ್ಯಾರಂಟಿಯಾಗಿ ಹೇಳುತ್ತೇನೆ ಅಂದ್ರೆ ಸಿದ್ದರಾಮಯ್ಯ ಅಧಿಕಾರ  ಬಿಟ್ಟುಕೊಡಲಿ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES