Friday, May 10, 2024

ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡದೆ ಇರುವುದು ಅಕ್ಷಮ್ಯ ಅಪರಾಧ

ಹುಬ್ಬಳ್ಳಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡದೆ ಅಕ್ಷಮ್ಯ ಅಪರಾಧ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹೌದು, ಅನ್ನ ಭಾಗ್ಯಯೋಜನೆಯಡಿಯಲ್ಲಿ ಅಕ್ಕಿ ನೀಡಲು ರಾಜ್ಯಸರ್ಕಾರ ಕೇಂದ್ರದ ಬಳಿ ಮನವಿ ಮಾಡಿತ್ತು. ಅಂದ್ರೆ ಮೊದಲು ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತೇವೆ ಅಂದಿದ್ದರು. ಇದೀಗ ರಾಜಕೀಯ ಕಾರಣಕ್ಕೆ ಅಕ್ಕಿ ಕೊಡತಿಲ್ಲ ಕೇಂದ್ರದ ನಾಯಕರು ಅಕ್ಕಿ ಕೊಡಸಲಿ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಕ್ಕೆ ಸಹಕಾರ ಕೊಡಬೇಕು. ಅಕ್ಕಿ ಕೊಡಲ್ಲ ಅನ್ನೋದು ಒಳ್ಳೆ  ನಡವಳಿಕೆ ಅಲ್ಲ ಎಂದಿದ್ದಾರೆ.

ಇದನ್ನೂ ಓದಿ: ಅಮೆರಿಕ ಸೆನೆಟ್ ನಲ್ಲೂ ‘ನಮೋ’ ಜಪ : 79 ಬಾರಿ ಚಪ್ಪಾಳೆ, 15 ಬಾರಿ ಎದ್ದು.

ಅಕ್ಕಿ ಕೊಟ್ಟರೇ ಕಾಂಗ್ರೆಸ್​ಗೆ ಲಾಭ ಆಗತ್ತೆ ಎಂದು ಬೇರೆ ಬೇರೆ ನೆಪ ಒಡ್ಡತಿದೆ. ಇದ ಅಕ್ಷಮ್ಯ ಅಪರಾಧ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

 

RELATED ARTICLES

Related Articles

TRENDING ARTICLES